Breaking News

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Spread the love

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ (Rain) ಲಕ್ಷಾಂತರ ರೂ. ಮೌಲ್ಯದ ಬಾಳೆ ಬೆಳೆ ನಾಶವಾಗಿದೆ.

ಅರಕಲಗೂಡು ತಾಲೂಕಿನ, ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಬಿರುಗಾಳಿಯ ಲೋಕೇಶ್, ಪರಮೇಶ್, ನಾಗರಾಜ್ ಎಂಬುವವರಿಗೆ ಸೇರಿದ ಸಾವಿರಾರು ಬಾಳೆ ಗಿಡಗಳು ಸರ್ವನಾಶವಾಗಿವೆ. ಫಸಲಿಗೆ ಬಂದಿದ್ದ ಅಪಾರ ಪ್ರಮಾಣದ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಇನ್ನೊಂದು ತಿಂಗಳಿನಲ್ಲಿ ಬಾಳೆಗೊನೆ ಕಟಾವು ಮಾಡಿ ಮಾರಾಟ ಮಾಡಬೇಕಿತ್ತು. ಆದರೆ ಭಾರೀ ಮಳೆ, ಗಾಳಿಗೆ ಬಾಳೆಗೊನೆ ಸಹಿತ ಗಿಡ ಮುರಿದು ಬಿದ್ದಿವೆ. ಇದರಿಂದಾಗಿ ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದಾರೆ.

ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರವನ್ನು ರೈತರು ಒತ್ತಾಯಿಸಿದ್ದಾರೆ. ಇದೇ ಗ್ರಾಮದ ಕೆಲ ರೈತರು ಬೆಳೆದಿದ್ದ ಮೆಕ್ಕೆಜೋಳ ಕೂಡ ನೆಲಕಚ್ಚಿದ್ದು ಎರಡು ವಾಸದ ಮನೆಗಳ ಹಂಚುಗಳು ಹಾರಿ ಹೋಗಿವೆ. ಇಷ್ಟಾದರೂ ಗ್ರಾಮಕ್ಕೆ ಯಾವುದೇ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಇಂದಿರಾ ಗಾಂಧಿ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ವಿವಾದ ಸೃಷ್ಟಿಸಿದ ಅಶೋಕ್ ಗೆಹ್ಲೋಟ್ ಹೇಳಿಕೆ

Spread the loveಜೈಪುರ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಇಂದು ಬದುಕಿದ್ದರೆ ಬಿಜೆಪಿಯನ್ನು ಬ್ಯಾನ್ ಮಾಡಿರುತ್ತಿದ್ದರು ಎಂಬ ರಾಜಸ್ಥಾನದ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ