Breaking News

ಯಾದಗಿರಿಯಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ದುರ್ಮರಣ

Spread the love

ಯಾದಗಿರಿ: ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಯಾದಗಿರಿ  ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ಕೊಂಡಗುಳಿ ಮೃತ ಕಾರ್ಮಿಕ. ಕೂಲಿ ಕೆಲಸ ಮಾಡಿ ಮರಳಿ ಮನೆ ಬಂದಾಗ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ

ಘಟನೆ ನಡೆದ ದಿನ ಮೃತ ಸಿದ್ದಪ್ಪ ಅವರು ಕೂಲಿ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಬಿಸಿಲು ಹೆಚ್ಚಾದ್ದರಿಂದ ಮನೆಗೆ ಮರಳಿದ್ದರು. ಮನೆಗೆ ಬಂದ ತಕ್ಷಣ ನೀರಿನ ದಾಹ ತಣಿಸಿಕೊಳ್ಳಲು ನೀರು ಕುಡಿದಿದ್ದರು. ಆದರೆ ನೀರು ಕುಡಿದ ಕೆಲ ಕ್ಷಣಗಳಲ್ಲೇ ಕುಸಿದು ಬಿದ್ದಿದ್ದು, ಮೃತಪಟ್ಟಿದ್ದಾರೆ.

ಮೃತ ಸಿದ್ದಪ್ಪ ಕುಟುಂಬಸ್ಥರು ಕಡುಬಡತನದಲ್ಲಿ ಜೀವನ ನಡೆಸುತ್ತಿದ್ದಾರೆ, ಸಿದ್ದಪ್ಪ ಸಾವಿನಿಂದ ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ. ಕೂಲಿ ನಾಲಿ ಮಾಡಿ ಸಿದ್ದಪ್ಪ ಕುಟುಂಬಕ್ಕೆ ನೆರವು ಆಗಿದ್ದ. ಹೀಗಾಗಿ ಸರ್ಕಾರ ಕೂಡಲೇ ಮೃತ ಕುಟುಂಬಸ್ಥರಿಗೆ ಸಹಾಯ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ