Breaking News

ಹಳೇ ವೈಷಮ್ಯ – ಮೂವರ ಮೇಲೆ ತಲ್ವಾರ್‌ ದಾಳಿ

Spread the love

ಬೆಳಗಾವಿ: ಇಲ್ಲಿನ  ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್‌ ದಾಳಿ ನಡೆಸಿದ್ದಾರೆ. ಹಳೇ ವೈಷಮ್ಯ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.

ದಾಳಿಗೊಳಗಾದವರನ್ನು ನಗರದ ವಲಿ ಶೇಖ್, ಇಮಾಮ್ ಶೇಖ್ ಮತ್ತು ಮಜೀದ್ ಶೇಖ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಗಾಯಾಳುಗಳ ಕುಟುಂಬಸ್ಥರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ತಮಿಳುನಾಡು ಗೆದ್ದ ಟಿವಿಕೆಗೆ ವಿಶ್‌ ಮಾಡಿದ ಮೋದಿ, ರಾಹುಲ್‌ ಗಾಂಧಿಗೆ ಧನ್ಯವಾದ ತಿಳಿಸಿದ ವಿಜಯ್‌

Spread the love ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಟಿವಿಕೆಗೆ  ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ