Breaking News

ಅಹಿಂದ ಮತಗಳೇ ಕಾಂಗ್ರೆಸ್ ಭದ್ರ ಬುನಾದಿ: ಮತಗಳ್ಳತನ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ ಪ್ರತಿಕ್ರಿಯೆ!

Spread the love

ಅಹಿಂದ ವರ್ಗಗಳೇ ಕಾಂಗ್ರೆಸ್ ಪಕ್ಷದ ಶಕ್ತಿ ಎಂದು ಗೃಹ ಸಚಿವ ಜಿ. ಪರಮೇಶ್ವರ ಇಂದು ದೃಢವಾಗಿ ಪ್ರತಿಪಾದಿಸಿದ್ದಾರೆ. ಅತ್ತ ಶೃಂಗೇರಿ ಮತಗಳ್ಳತನ ವಿವಾದದ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಪ್ರಕರಣದ ಮುಂದಿನ ಕಾನೂನು ಹೋರಾಟದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ.”

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ ಅವರು ಅಹಿಂದ್ ಮತಗಳೇ ಮೊದಲಿನಿಂದಲೂ ಕಾಂಗ್ರೆಸ್’ಗೆ ಬುನಾದಿ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು, ಬೇರೆ ಬೇರೆ ಸಮುದಾಯದವರೇ ಕಾಂಗ್ರೆಸ್ಸಿನ ಮೂಲ ಮತದಾರರು ಎಂದರು.

ಇನ್ನು ಶೃಂಗೇರಿ ವಿಚಾರಕ್ಕೆ ಸಂಬಂಧಿಸಿದಂತೆ ಮತಗಳ್ಳತನದ ವಿರುದ್ಧ ದೂರು ಕೊಟ್ಟಿದ್ದು, ಎಫ್.ಐ.ಆರ್ ದಾಖಲಾಗಿದೆ. ಆದರೇ ಸ್ಟೇ ತರಲಾಗಿದೆ. 2 ದಿನದ ಕಾಲಾವಕಾಶ ನೀಡಿದ್ದು, ಚುನಾವಣಾ ಆಯೋಗ ಈಗಾಗಲೇ ಪ್ರಮಾಣಪತ್ರ ನೀಡಿದೆ. ರಾಜುಗೌಡು ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರಾ ಎಂಬುದನ್ನು ನೋಡಬೇಕು ಎಂದರು.


Spread the love

About Laxminews 24x7

Check Also

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Spread the loveಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ