Breaking News

ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅಮಾನತು ಆದೇಶ ವಾಪಸ್: ಹೊಸ ಹುದ್ದೆ ಸೃಷ್ಟಿದ ಸರ್ಕಾರ

Spread the love

ಬೆಂಗಳೂರು: ಮಹಿಳೆಯರೊಂದಿಗಿನ ವೀಡಿಯೊ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗಾಗಿಯೇ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಎನ್ನುವ ಹೊಸ ಹುದ್ದೆ ಸೃಷ್ಟಿಸಿದೆ.  ಆಲ್ ಇಂಡಿಯಾ ಸರ್ವಿಸ್ ನಿಯಮಗಳ ಅಡಿ ಈಗ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.  ಕಚೇರಿಯಲ್ಲಿ ಮಹಿಳೆಯರೊಂದಿಗೆ ಕೆ.ರಾಮಚಂದ್ರ ರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿತ್ತು. ದೃಶ್ಯಗಳು ಎಡಿಟ್​​ ಆಗಿಲ್ಲ. ಅವು ಡೀಪ್‌ಫೇಕ್ ಮತ್ತು AI ನಿರ್ಮಿತ ಅಲ್ಲ ಎಂದು ಸ್ಪಷ್ಟಪಡಿಸಿತ್ತು. ಆದರೂ ಸಹ ಅಮಾನತು ಹಿಂಪಡೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

ಡಾ. ಕೆ.ರಾಮಚಂದ್ರ ರಾವ್ ಅವರು ಪೊಲೀಸ್ ಸಮವಸ್ತ್ರ ಧರಿಸಿ, ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸರ್ಕಾರಿ ಕಚೇರಿಯಲ್ಲಿ, ಉನ್ನತ ದರ್ಜೆಯ ಅಧಿಕಾರಿಯೊಬ್ಬರು ಇಂತಹ ಕೃತ್ಯವೆಸಗಿರುವುದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಇಲಾಖೆಗೆ ಮುಜುಗರವನ್ನುಂಟು ಮಾಡಿತ್ತು. ಇದರ ಬೆನ್ನಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ಜನವರಿ 19ರಂದು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿತ್ತು. ಬಳಿಕ ರಾಮಚಂದ್ರ ರಾವ್ ಅವರ ವಿರುದ್ಧ ಇಲಾಖಾ ತನಿಖೆಯನ್ನ ಪ್ರಾರಂಭಿಸಲಾಗಿತ್ತು.

ಕಳೆದ ತಿಂಗಳು ಏಪ್ರಿಲ್​ 27 ರಂದು ರಾಮಚಂದ್ರರಾವ್​ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಇದೇ ವೇಳೆ ಅಶ್ಲೀಲ ವಿಡಿಯೋ ಕೇಸ್​​ನಲ್ಲಿ ಸಿಲುಕಿರುವ ರಾಮಚಂದ್ರ ರಾವ್​ ಅವರು ವಿಡಿಯೋ ವೈರಲ್ ಆದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದರು. ನನ್ನ ಸಸ್ಪೆನ್ಶನ್ ಬಗ್ಗೆ ಮಾತಾಡಿದ್ದೇನೆ. ತನಿಖೆ ನಡೆಯುತ್ತಿದೆ ಅದರ ಬಗ್ಗೆ ಮಾತಾಡಲ್ಲ, ನನ್ನ ಮೇಲೆ ಯಾವುದೂ ಕೇಸ್ ಇಲ್ಲ, ಈಗಲೇ ಸಾಕಷ್ಟು ಸಫರ್ ಆಗಿದ್ದೇನೆ ಬೇಡ ಪ್ಲೀಸ್​ ಎಂದಿದ್ದರು.

ವಿಡಿಯೋಗಳು ವೈರಲ್ ಆಗಿ ಪ್ರಕರಣ ಗಂಭೀರವಾಗಿದ್ದರೂ ಸಹ ರಾಜ್ಯ ಸರ್ಕಾರ ಇದೀಗ ಏಕಾಏಕಿ ಅವರ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದ್ದು ಅಚ್ಚರಿಕೆ ಕಾರಣವಾಗಿದೆ. ಅಲ್ಲದೇ ಸರ್ಕಾರದ ಈ ನಡೆದ ಚರ್ಚೆಗೆ ಗ್ರಾಸವಾಗಿದೆ.


Spread the love

About Laxminews 24x7

Check Also

ವಿದ್ಯುತ್ ತಂತಿ ಸ್ಪರ್ಶಿಸಿ ಇಂಗಳಿ ಗ್ರಾಮದ ಬಾಲಕಿ ಸಾವು

Spread the loveಚಿಕ್ಕೋಡಿ : ವಿದ್ಯುತ್ ತಂತಿ ಸ್ಪರ್ಶಿಸಿ ತಾಲೂಕಿನ ಇಂಗಳಿ ಗ್ರಾಮದ ಸಾನ್ವಿ ಕಾಂಬಳೆ(೯) ಬಾಲಕಿ ಮೃತಪಟ್ಟಿರುವ ಘಟನೆ ಮಂಗಳವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ