Breaking News

ಗೋಕಾಕನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

Spread the love

ಗೋಕಾಕ: ನಾವೆಲ್ಲರೂ ಕನ್ನಡ ನಾಡು, ನುಡಿ, ಸಂಸ್ಕೃತಿ ಗೌರವಿಸಬೇಕು ಎಂದು ಗೋಸಬಾಳಿನ ಸರ್ಕಾರಿ ಶಾಲೆಯ ಶಿಕ್ಷಕ ಬಾಳೇಶ ಕೀರಪ್ಪನವರ ಹೇಳಿದರು.
ನಗರದ ಬಸವ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೋಕಾಕ ತಾಲೂಕು ಘಟಕ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ಯುವ ಪೀಳಿಗೆಯಲ್ಲಿ ಕನ್ನಡಾಭಿಮಾನ ಬೆಳೆಸಬೇಕಿದೆ.
ನಾವೆಲ್ಲರೂ ಒಗ್ಗಟ್ಟಾಗಿ ಕನ್ನಡ ನಾಡಿನ ಸಂಸ್ಕೃತಿ ಹಾಗೂ ಭಾಷೆ ಶ್ರೀಮಂತಗೊಳಿಸೋಣ ಎಂದರು. ವೇದಿಕೆಯಲ್ಲಿ ಕಸಾಪ ತಾಲೂಕು ಅಧ್ಯಕ್ಷೆ ಭಾರತಿ ಮದಭಾವಿ, ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ತಾವಂಶಿ, ಸಾಹಿತಿ ಚಂದ್ರಶೇಖರ ಅಕ್ಕಿ ಇತರರಿದ್ದರು.

Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ