Breaking News

ಸರ್ಕಾರ ರಚಿಸುವ ಪಕ್ಷ ಬಹುಮತ ಮನವರಿಕೆ ಮಾಡಿಕೊಡಿಬೇಕು: ರಾಜ್ಯಪಾಲ ಅರ್ಲೇಕರ್

Spread the love

ಚೆನ್ನೈ: ಚುನಾವಣಾ ಫಲಿತಾಂಶದ ಬಳಿಕ ಯಾವ ಪಕ್ಷ ಸರ್ಕಾರವನ್ನ ರಚಿಸುತ್ತೇವೆ ಎಂದು ಮುಂದೆ ಬರುತ್ತದೆಯೋ ಅವರು ಬಹುಮತ ಇದೆ ಎನ್ನುವುದನ್ನು ನನಗೆ ಮನವರಿಕೆ ಮಾಡಬೇಕು. ಈಗಲೂ ಇದಕ್ಕಿಂತ ಹೆಚ್ಚು ನಾನು ಏನು ಕೇಳಿಲ್ಲ ಎಂದು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್  ಹೇಳಿದ್ದಾರೆ.

ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು, ಯಾವುದೇ ಒಂದು ಪಕ್ಷ ಸರ್ಕಾರ ರಚಿಸಲು ಬಂದಾಗ ಅವರು ಬಹುಮತ ಇರುವ ಬಗ್ಗೆ ಖಾತರಿಪಡಿಸಬೇಕು. ನಾನು ತಲೆ ಎಣಿಕೆಯನ್ನು ಕೇಳುತ್ತಿಲ್ಲ. ಅದು ನನ್ನ ಅಧಿಕಾರ ಅಲ್ಲ. ಬಹುಮತವನ್ನು ವಿಧಾನಸಭೆಯಲ್ಲಿ ಸಾಬೀತುಪಡಿಸಲಿ ಎಂದರು.

ಬಹುಮತದ ಜೊತೆಗೆ ಯಾರೇ ಬಂದರೂ ಅವರಿಗೆ ಅವಕಾಶ ನೀಡಬೇಕು. ಇದು ಪ್ರಜಾಪ್ರಭುತ್ವ ವ್ಯವಸ್ಥೆ ಭಾಗ. ಅದರಲ್ಲಿ ಯಾವುದೇ ತಪ್ಪಿಲ್ಲ. ಅಂತಿಮವಾಗಿ ಸಂಖ್ಯೆ ಮುಖ್ಯ. ಸಂಖ್ಯೆಗಳಿದ್ದರೆ ನಾನು ನಾಳೆಯೇ ಪ್ರಮಾಣ ವಚನ ಬೋಧಿಸಲು ಸಿದ್ಧವಿದ್ದೇನೆ. 118 ಸಂಖ್ಯೆಯೊಂದಿಗೆ ಟಿವಿಕೆ ಹೊರತಾಗಿ ಯಾರೂ ಬರದಿದ್ದರೆ ಏನು ಮಾಡಬಹುದು ಯೋಚಿಸಬೇಕು. ಸಂವಿಧಾನದ ಆಯ್ಕೆಗಳನ್ನು ಪರಿಶೀಲಿಸಬೇಕು ಎಂದು ತಿಳಿಸಿದರು.

ಎಸ್‌ಆರ್ ಬೊಮ್ಮಾಯಿ ಪ್ರಕರಣ ಹೊಸ ಸರ್ಕಾರ ರಚನೆಗೆ ಸಂಬಂಧಿಸಿದ್ದಲ್ಲ. ಇದು ಹೊಸ ಸರ್ಕಾರ ರಚನೆಗೆ ಸಂಬಂಧಿಸಿದೆ. ಬಹುಮತಕ್ಕೆ ಬೇಕಾದ ಸಂಖ್ಯೆ ಕೇಳುತ್ತಿದ್ದೇನೆ. ನನ್ನ ಮುಂದೆ ತಲೆ ಎಣಿಕೆ ಮಾಡಲು ನಾನು ಹೇಳುತ್ತಿಲ್ಲ. ಅದನ್ನು ವಿಧಾನಸಭೆಯಲ್ಲಿ ಮಾಡಲಿ. ಕುದುರೆ ವ್ಯಾಪರ ಆರಂಭವಾಗಿರುವುದು ಒಳ್ಳೆ ಬೆಳವಣಿಗೆಯಲ್ಲ. ನಾನು ಸಮಸ್ಯೆಯನ್ನು ಶೀಘ್ರ ಬಗೆಹರಿಸಲು ಸಿದ್ಧವಿದ್ದೇನೆ. ಆದರೆ ಬಹುಮತಕ್ಕೆ ಸಂಖ್ಯೆಯೂ ಬೇಕು ಎಂದು ಹೇಳಿದರು.

ಸಂಖ್ಯೆಗಳಿಲ್ಲದೆ ಪ್ರಮಾಣವಚನ ಬೋಧಿಸಿ ಬಹುಮತ ಸಾಬೀತು ಪಡಿಸಿ ಎಂದು ಹೇಳುವುದು ಸರಿಯಲ್ಲ. ಇದು ಅವರ ಸಮಸ್ಯೆಯಲ್ಲ. ಇದು ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ಸಂಖ್ಯೆ ಇಲ್ಲದೇ ಪ್ರಮಾಣ ವಚನ ಬೋಧಿಸುವುದು ಹೇಗೆ. ಇದರಿಂದ ಜನರಿಗೆ ಸಮಸ್ಯೆಯಾಗಲಿದೆ. ನಾನು ವಿಜಯ್ ಅವರನ್ನು ಸರ್ಕಾರ ರಚನೆಗೆ ತಡೆಯಲು ಪ್ರಯತ್ನಿಸುತ್ತಿಲ್ಲ. ಪ್ರಜಾಪ್ರಭುತ್ವಕ್ಕೆ ಆದ್ಯತೆ ಕೊಡಲು ನಾನಿಲ್ಲಿ ಕೂತಿದ್ದೇನೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.


Spread the love

About Laxminews 24x7

Check Also

ಸಂತಾನಹರಣ ಚಿಕಿತ್ಸೆ ವೇಳೆ ಕರುಳು ಕಟ್ – ವೈದ್ಯರ ಯಡವಟ್ಟಿನಿಂದ ಮಹಿಳೆ ಸಾವು: ಪತಿ ಆರೋಪ

Spread the loveಚಿಕ್ಕಬಳ್ಳಾಪುರ: ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಕರುಳು ಕತ್ತರಿಸಿ ವೈದ್ಯರ ಯಡವಟ್ಟು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ