ನವದೆಹಲಿ: ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಿದ ವಿಚಾರವಾಗಿ ಕಾಂಗ್ರೆಸ್ ಮತ್ತು ಡಿಎಂಕೆ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ.
“ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿದೆ” ಎಂಬ ಡಿಎಂಕೆಯ ಗಂಭೀರ ಆರೋಪಕ್ಕೆ, ರಾಹುಲ್ ಗಾಂಧಿ ಆಪ್ತ ಹಾಗೂ ಕಾಂಗ್ರೆಸ್ ನಾಯಕ ಶ್ರೀವತ್ಸ(Srivatsa) ಅವರು ಅಂಕಿ-ಅಂಶ ಹಾಗೂ ಇತಿಹಾಸದ ದಾಖಲೆಗಳೊಂದಿಗೆ ತಿರುಗೇಟು ನೀಡಿದ್ದಾರೆ.
ಈ ಹಿಂದೆ ಕರ್ನಾಟಕ ಕಾಂಗ್ರೆಸ್ ಜಾಲತಾಣ ಮುಖ್ಯಸ್ಥರಾಗಿದ್ದ ಶ್ರೀವತ್ಸ ಅವರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಾಕುವ ಮೂಲಕ ಡಿಎಂಕೆಯ ಹಳೆಯ ಮೈತ್ರಿ ರಾಜಕೀಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ರಾಹುಲ್ ಗಾಂಧಿ ಅವರು ಎನ್ಡಿಎ ಮೈತ್ರಿಕೂಟವನ್ನು ಅಧಿಕಾರದಿಂದ ದೂರವಿಡಲು ಮತ್ತು ತಮಿಳುನಾಡಿನ ಜನರ ಜನಾದೇಶವನ್ನು ಗೌರವಿಸಲು ಟಿವಿಕೆಯನ್ನು ಬೆಂಬಲಿಸಿದ್ದಾರೆ. ಈ ಮಾಸ್ಟರ್ ಪ್ಲಾನ್ ಯಶಸ್ವಿಯಾಗಿದ್ದು, ದಳಪತಿ ವಿಜಯ್ ಮುಖ್ಯಮಂತ್ರಿಯಾಗುವುದು ಖಚಿತ.
Laxmi News 24×7