Breaking News

ಬೈಕ್ ಅಪಘಾತ ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ಗುದ್ದಿದ ಬಿಎಂಟಿಸಿ ಬಸ್

Spread the love

ಬೆಂಗಳೂರು: ಬೈಕ್‌ಗೆ  ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ಬಿಎಂಟಿಸಿ ಬಸ್  ಗುದ್ದಿದ ಘಟನೆ ಬೆಂಗಳೂರಿನ  ಬೃಂದಾವನ ಬಸ್ ನಿಲ್ದಾಣದ ಬಳಿ ನಡೆದಿದೆ.

ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಘಟಕ 9ಕ್ಕೆ ಸೇರಿದ ಬಿಎಂಟಿಸಿ ಬಸ್ 8ನೇ ಮೈಲಿಯಿಂದ ಹೇರೋಹಳ್ಳಿ ಕ್ರಾಸ್‌ಗೆ ತೆರಳುತ್ತಿದ್ದಾಗ ಏಕಾಏಕಿ ಎದುರಿನಿಂದ ಬೈಕ್ ಬಂದಿದೆ. ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಶಿವ ದೇಗುಲಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ ಪರಿಣಾಮ ಶಿವನ ದೇಗುಲದ ಕಾಂಪೌಂಡ್ ಹಾಗೂ ಗ್ರಿಲ್‌ಗೆ ಹಾನಿಯಾಗಿದೆ. ಅಪಘಾತದಿಂದ ಬೈಕ್ ಸವಾರನ ಬಲಗೈಗೆ ತರಚಿದ ಗಾಯಗಳಾಗಿದೆ. ಬಸ್ ಚಾಲಕ ಹಾಗೂ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.


Spread the love

About Laxminews 24x7

Check Also

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?

Spread the loveಬೆಂಗಳೂರು: ಕತ್ರಿಗುಪ್ಪೆಯ ಕಾಮಾಕ್ಯ ಎಲೆಕ್ಟ್ರಿಕಲ್ ಡಿಪೋ 13ರಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಪ್ರತಿಭಟನೆ ನಡೆಸಿದ್ದಾರೆ. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ