ನಿಪ್ಪಾಣಿ ಕ್ಷೇತ್ರದ ಕಾರದಗಾ ಗ್ರಾಮದಲ್ಲಿ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾದ 110 ಕೆ.ವಿ.ವಿದ್ಯುತ್ ಸ್ಟೇಷನ್ ಕಾಮಗಾರಿಗಾಗಿ 22 ಕೋಟಿ ರೂ ಅನುದಾನ ಮಂಜೂರಾಗಿದ್ದು ಅಧಿಕಾರಿಗಳೊಂದಿಗೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಜನಪ್ರಿಯ ಶಾಸಕರಾದ ಸೌ.ಶಶಿಕಲಾ ಜೊಲ್ಲೆ ಜಿ ಹಾಗೂ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ,ಸ್ಥಳವನ್ನು ವೀಕ್ಷಿಸಿದರು.ಅದಷ್ಟು ಬೇಗನೆ ಭೂಮಿ ಪೂಜೆ ನೆರವೇರಿಸಲಾಗುವುದು.
ರೈತರಿಗೆ ಸಕಾಲಕ್ಕೆ ವಿದ್ಯುತ್ ಒದಗಿಸುವುದು ಮತ್ತು ಕಡಿಮೆ ವೋಲ್ಟೇಜ್ ಸಮಸ್ಯೆಯಿಂದ ಜನರಿಗೆ ಮುಕ್ತಿ ನೀಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಈ ವಿದ್ಯುತ್ ಕೇಂದ್ರವು ಈ ಭಾಗದ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಹೆಚ್ಚಿನ ವೇಗ ನೀಡಲಿದೆ.ಸುತ್ತಮುತ್ತಲಿನ ಗ್ರಾಮಗಳಿಗೆ ವಿಧ್ಯುತ ಸಮಸ್ಯೆ ಬಗೆಹರಿಯಲಿದೆ.
Laxmi News 24×7