Breaking News

ಮಕ್ಕಳಾಗಲಿಲ್ಲ ಅಂತ ಮನನೊಂದು ಮಹಿಳೆ ಆತ್ಮಹತ್ಯೆ ಶಂಕೆ

Spread the love

ಚಿಕ್ಕಬಳ್ಳಾಪುರ: ಮಕ್ಕಳಾಗಲಿಲ್ಲ ಅಂತ ಮನನೊಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ  ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ.

24 ವರ್ಷದ ರುಚಿತಾ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಚಿಕ್ಕಬಳ್ಳಾಪುರ ತಾಲೂಕಿನ ದರಬೂರು ಗ್ರಾಮದ ರುಚಿತಾಗೆ ದೊಡ್ಡಬಳ್ಳಾಪುರ  ತಾಲೂಕಿನ ವೀರಾಪುರ ಗ್ರಾಮದ ಕೇಶವ ಜೊತೆ 4 ವರ್ಷಗಳ ಹಿಂದೆ ಮದುವೆಯಾಗಿದ್ದರು.

ಗಂಡ-ಹೆಂಡತಿ ನಡುವೆ ಬೇರೆ ಮನೆ ಮಾಡುವ ವಿಚಾರದಲ್ಲಿ ವೈಮನಸ್ಸು ಮಾಡಿದ್ದು, ಮಂಚನಬಲೆಯ ಸಂಬಂಧಿಕರ ಮನೆಗೆ ಬಂದಿದ್ದಳು. ಈ ವೇಳೆ ಮನನೊಂದು ರುಚಿತಾ ಮನೆಯಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಿಖ್ ವಿರೋಧಿ ದಂಗೆ ಕೇಸ್‌ ಅಪರಾಧಿ, ಜೈಲಿನಲ್ಲಿದ್ದ ಮಾಜಿ ಕಾಂಗ್ರೆಸ್‌ ಸಂಸದ ಸಜ್ಜನ್ ಕುಮಾರ್ ನಿಧನ

Spread the loveನವದೆಹಲಿ: ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ  ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್  ಸಂಸದ ಸಜ್ಜನ್ ಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ