Breaking News

ಬೆಂಗ್ಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದೋಚಿದ ಖದೀಮರು

Spread the love

ಮಂಡ್ಯ: ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್‌ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ಮದ್ದೂರು  ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೈಸೂರಿನ  ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು ಅವರು ತೆರಳುತ್ತಿದ್ದ ಐ-20 ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಹಣ ದೋಚಿ ಪರಾರಿಯಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ತಮ್ಮ ಕಂಪನಿಗೆ ಹಣ ವಿತರಣೆ ಮಾಡಲು ಮೈಸೂರಿನಿಂದ – ಬೆಂಗಳೂರಿಗೆ ತೆರಳುತ್ತಿದ್ದರು. ಪಟ್ಟಣದ ಹೊರ ವಲಯದ ಐಶ್ವರ್ಯ ಕಾನ್ವೆಂಟ್ ಬಳಿ ಇನ್ನೋವಾ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಗೋವಿಂದರಾಜು ಅವರ ಕಾರನ್ನು ಅಡ್ಡಗಟ್ಟಿ ಕಾರಿನ ಗಾಜು ಒಡೆದು, ಮಾರಕಾಸ್ತ್ರಗಳನ್ನು ತೋರಿಸಿ, ಬೆದರಿಕೆ ಹಾಕಿ 26 ಲಕ್ಷ ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಗೋವಿಂದರಾಜು ತಕ್ಷಣ ಮದ್ದೂರು ಪೊಲೀಸರಿಗೆ ಘಟನೆ ಕುರಿತು ಮಾಹಿತಿ ನೀಡಿದರು. ತಕ್ಷಣ ವೃತ್ತ ನಿರೀಕ್ಷಕ ನವೀನ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭರಾಣಿ, ಎಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಯಶ್ವಂತ್‌ಕುಮಾರ್ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.


Spread the love

About Laxminews 24x7

Check Also

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ

Spread the loveಹಾವೇರಿ: ನೌಕಾಪಡೆಯ ಯೋಧ  ಕರ್ತವ್ಯದ ವೇಳೆ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಹಾವೇರಿ  ಜಿಲ್ಲೆಯ ಹಾನಗಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ