Breaking News

ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು; ತನಿಖೆಗೆ ಆದೇಶಿಸಿದ ಬೆಳಗಾವಿ ಡಿಸಿ

Spread the love

ಬೆಳಗಾವಿ : ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಬಿಮ್ಸ್ ಆಸ್ಪತ್ರೆಯಲ್ಲಿ 65 ವರ್ಷದ ವೃದ್ಧರೊಬ್ಬರು ನರಳಾಡಿ ಸಾವನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮದಲ್ಲಿ ಸುದ್ಧಿ ಬಿತ್ತರವಾದ ಹಿನ್ನಲೆಯಲ್ಲಿ, ಎಚ್ಚೆತ್ತುಕೊಂಡ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಮ್ಸ್ ನಿರ್ದೇಶಕರಿಗೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಸಿ ಹಿರೇಮಠ ಅವರು, ಬಿಮ್ಸ್ ನಿರ್ದೇಶಕರಿಗೆ ತನಿಖೆಗೆ ಆದೇಶಿಸಿದ್ದೇನೆ. ವಿಡಿಯೋ ನೋಡಿ ತನಿಖೆಗೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಉಸಿರಾಟದ ಸಮಸ್ಯೆ ಇರುವವರನ್ನು ಬಿಮ್ಸ್ ಗೆ ಕಳುಹಿಸಿ ಎಂದು ಖಾಸಗಿ ಆಸ್ಪತ್ರೆಗಳಿಗೆ ಡಿಸಿ ಎಂ.ಜಿ.ಹಿರೇಮಠ ಅವರು ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ