Breaking News

ಬೆಂಗಳೂರು: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮಾಜಿ ಆರ್‌ಜೆ ಮನೀಷಾ ಆತ್ಮಹತ್ಯೆ; ಪ್ರಿಯಕರನ ವಿರುದ್ಧ 3 ಪುಟಗಳ ಡೆತ್‌ನೋಟ್‌!

Spread the love

​ಬೆಂಗಳೂರು: ಮುಂಬೈ ಮೂಲದ ಮಾಜಿ ರೇಡಿಯೋ ಜಾಕಿ (RJ) ಮನೀಷಾ ಪ್ರಸಾದ್ (48) ಅವರು ಬೆಂಗಳೂರಿನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೇ 23 ರಂದು ಹೆಣ್ಣೂರು ಸಮೀಪದ ಮಾನ್ಯತಾ ಟೆಕ್ ಪಾರ್ಕ್ ಆವರಣದಲ್ಲಿರುವ ಫ್ಲ್ಯಾಟ್‌ನಲ್ಲಿ ಈ ದುರ್ಘಟನೆ ನಡೆದಿದೆ.

​ಸ್ಥಳದಲ್ಲಿ 3 ಪುಟಗಳ ಡೆತ್‌ನೋಟ್ ಪತ್ತೆಯಾಗಿದ್ದು, ಲಿವಿಂಗ್ ಟುಗೆದರ್‌ನಲ್ಲಿದ್ದ ಪ್ರಿಯಕರ ಹರ್ಷವರ್ಧನ್ ಸಿಂಗ್ ಬನ್ಸಾಲ್ ನೀಡಿದ ಮಾನಸಿಕ ಕಿರುಕುಳವೇ ತನ್ನ ಸಾವಿಗೆ ಕಾರಣ ಎಂದು ಮನೀಷಾ ಆರೋಪಿಸಿದ್ದಾರೆ.

​ಘಟನೆಯ ಹಿನ್ನೆಲೆ:
​ವಿಚ್ಛೇದನ ಮತ್ತು ಹೊಸ ಜೀವನ: ಮುಂಬೈನಲ್ಲಿ ಆರ್‌ಜೆ ಆಗಿದ್ದ ಮನೀಷಾ, ಕೌಟುಂಬಿಕ ಕಾರಣಗಳಿಂದಾಗಿ 2024 ರಲ್ಲಿ ಪತಿಯಿಂದ ವಿಚ್ಛೇದನ ಪಡೆದಿದ್ದರು.

​ಸಹಜೀವನ ಮತ್ತು ಕಿರುಕುಳ: ಆ ಬಳಿಕ ಅವರು ಮುಂಬೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಹಿಮಾಚಲ ಪ್ರದೇಶ ಮೂಲದ ಹರ್ಷವರ್ಧನ್ ಸಿಂಗ್‌ನನ್ನು ಪ್ರೀತಿಸಿ, ಆತನೊಂದಿಗೆ ಲಿವಿಂಗ್ ಟುಗೆದರ್‌ನಲ್ಲಿದ್ದರು. ಆದರೆ, ಇತ್ತೀಚೆಗೆ ಆತನಿಂದ ತೀವ್ರ ಮಾನಸಿಕ ಹಾಗೂ ದೈಹಿಕ ಕಿರುಕುಳ ಎದುರಿಸುತ್ತಿದ್ದರು ಎನ್ನಲಾಗಿದೆ.

​ಬೆಂಗಳೂರಿಗೆ ವಲಸೆ: ಪ್ರಿಯಕರನ ಕಿರುಕುಳ ತಾಳಲಾರದೆ ಮನೀಷಾ ಕಳೆದ ಏಪ್ರಿಲ್‌ನಲ್ಲಿ ಬೆಂಗಳೂರಿಗೆ ಬಂದು ಮಾನ್ಯತಾ ಟೆಕ್ ಪಾರ್ಕ್ ಬಳಿ ಹೊಸ ಫ್ಲ್ಯಾಟ್ ಖರೀದಿಸಿ ವಾಸಿಸಲು ಆರಂಭಿಸಿದ್ದರು.

​ಮುಂಬೈ ವಸ್ತುಗಳು ಬಂದ ದಿನವೇ ದುರಂತ:
​ಮೇ 23 ರಂದು ಮುಂಬೈನ ಮನೆಯಲ್ಲಿದ್ದ ತಮ್ಮ ಎಲ್ಲಾ ಸಾಮಗ್ರಿಗಳನ್ನು ಬೆಂಗಳೂರಿನ ಹೊಸ ಫ್ಲ್ಯಾಟ್‌ಗೆ ಶಿಫ್ಟ್ ಮಾಡಿದ ದಿನವೇ ಮನೀಷಾ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಸಂಬಂಧಿಕರು ಫೋನ್ ಮಾಡಿದಾಗ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆಗೆ ಬಂದು ಪರಿಶೀಲಿಸಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

​ಡೆತ್‌ನೋಟ್‌ನಲ್ಲಿ ಏನಿದೆ?:
“ನನ್ನ ಸಾವಿಗೆ ಹರ್ಷವರ್ಧನ್ ಸಿಂಗ್ ಬನ್ಸಾಲ್ ಕಾರಣ. ಕಳೆದ ಕೆಲವು ವರ್ಷಗಳಿಂದ ನಾವು ಒಟ್ಟಿಗೆ ಇರುತ್ತಿದ್ದ ವಿಷಯ ಆತನ ಮನೆಯವರಿಗೂ ಗೊತ್ತಿತ್ತು. ಆದರೆ ಆತ ನನಗೆ ಪ್ರತಿದಿನ ತೀವ್ರ ಮಾನಸಿಕ ಕಿರುಕುಳ ನೀಡುತ್ತಿದ್ದ. ಆತನ ಹಿಂಸೆ ತಡೆಯಲು ಸಾಧ್ಯವಾಗದೆ ಮನನೊಂದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ,” ಎಂದು ಮನೀಷಾ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

​ಪೊಲೀಸ್ ತನಿಖೆ:
​ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಅಮೃತಹಳ್ಳಿ ಠಾಣೆ ಪೊಲೀಸರು ಮನೀಷಾ ಅವರ ಮೊಬೈಲ್ ಹಾಗೂ 3 ಪುಟಗಳ ಡೆತ್‌ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಪ್ರಿಯಕರ ಹರ್ಷವರ್ಧನ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Spread the loveಬೆಂಗಳೂರು: ಅಹಿಂದ ನಾಯಕ ಸಿದ್ದರಾಮಯ್ಯ ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಾಂಗ್ರೆಸ್‌ನಲ್ಲಿ ಎರಡನೇ ಅವಧಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ