Breaking News

ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ

Spread the love

ಹಾಸನ: ಜಿಲ್ಲೆಯ ವಿವಿಧೆಡೆ ಇಂದು ಕೂಡ ಬಾರಿ ಮಳೆಯಾಗಿದೆ. ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಾಸನ, ಅರಸೀಕೆರೆ, ಚನ್ನರಾಯಪಟ್ಟಣ ತಾಲ್ಲೂಕಿನ ವಿವಿಧೆಡೆ ವರುಣ ಅಬ್ಬರಿಸಿದ್ದು, ಗುಡುಗು, ಸಿಡಿಲು ಸಹಿತ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದಾರೆ. ಮಳೆಗೆ ವಾಹನ ಸವಾರರು, ಬೀದಿ ಬದಿ ವ್ಯಾಪಾರಿಗಳು ಪರದಾಡುವಂತಾಗಿತ್ತು. ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಉತ್ತಮ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಕೃಷಿ ಚಟುವಟಿಕೆಗೂ ಮಳೆ ಬಿಡುವು ನೀಡುತ್ತಿಲ್ಲ.

ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಖಾಲಿಯಾಗಿದ್ದು, ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಾಗಿತ್ತು. ಅಲ್ಲದೇ ಹಸಿರು ಮೇವಿಲ್ಲದೆ ರೈತರು ಸಮಸ್ಯೆ ಎದುರಿಸುತ್ತಿದ್ದರು. ಇದೀಗ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆರೆ-ಕಟ್ಟೆಗಳು ತುಂಬುತ್ತಿದ್ದು, ಹಸಿರು ಮೇವು ಚಿಗುರುತ್ತಿದ್ದು ರೈತರು ಸಂತಸಗೊಂಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ