Breaking News

ರಾತ್ರಿ ರಕ್ತ ತರುವಂತೆ ಹೇಳಿ ಬೆಳಗ್ಗೆ ಸಾವಿನ ಸುದ್ದಿ ತಿಳಿಸಿದ್ರು’- ವೈದ್ಯರ ವಿರುದ್ಧ ಕಿಡಿ

Spread the love

ವಿಜಯಪುರ: ಹೆರಿಗೆ ಸಮಯದಲ್ಲಿ ತಾಯಿ-ಮಗು ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ನಗರದ ಜಿಲ್ಲಾ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಹೆರಿಗೆಗೆಂದು ಕವಿತಾರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಗ ನಾರ್ಮಲ್ ಡೆಲಿವರಿಯಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ.

ತಡರಾತ್ರಿ ರಕ್ತ ತೆಗೆದುಕೊಂಡು ಬರಲು ವೈದ್ಯರು ಸೂಚಿಸಿದ್ದಾರೆ. ಆದರೆ ಬೆಳಗ್ಗೆ ಸಾವಿನ ವಿಚಾರವನ್ನೇ ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ವೈದ್ಯರ ನಿರ್ಲಕ್ಷ್ಯದಿಂದಲೇ ತಾಯಿ ಹಾಗೂ ಮಗುವಿನ ಸಾವಾಗಿದೆ ಎಂದು ಆರೋಪಿಸುತ್ತಿದ್ದಾರೆ.

ಘಟನೆಯ ಬಳಿಕ ಜಿಲ್ಲಾ ಹೆರಿಗೆ ಆಸ್ಪತ್ರೆ ಎದುರು ಸಂಬಂಧಿಕರು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 


Spread the love

About Laxminews 24x7

Check Also

ಕಬ್ಬು ಬೆಳೆಗಾರರಿಗೆ 300 ಕೋಟಿ ರೂ. ಬಿಡುಗಡೆ: ಸಚಿವ ಶಿವಾನಂದ ಪಾಟೀಲ

Spread the loveವಿಜಯಪುರ : ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ