ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ ಬಿಗ್ ಶಾಕ್ ಎದುರಾಗಿದೆ. ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ನಾಗೇಂದ್ರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ನಾಗೇಂದ್ರ ವಿರುದ್ಧ ಸಿಬಿಐ ಅಧಿಕಾರಿಗಳು ಮೂರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮೂರು ಚಾರ್ಜ್ಶೀಟ್ನಲ್ಲಿ ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ.
89 ಕೋಟಿ ಹಗರಣದಲ್ಲಿ ನಾಗೇಂದ್ರ ಸಿಲುಕಿದ್ದರು. ಸದ್ಗುರು ಟ್ರಸ್ಟ್ ಎಂದು ನಕಲಿ ಅಕೌಂಟ್ ಸೃಷ್ಟಿಸಿದ್ದರು. ಇದೇ ದುಡ್ಡಿನಲ್ಲಿ ಕೋಟ್ಯಂತರ ಹಣ ಸ್ವಂತಕ್ಕೆ ಬಳಕೆ ಮಾಡಿರುವುದು ಸಾಬೀತಾಗಿದೆ.
Laxmi News 24×7