Breaking News

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್‌ ಪಾಸ್‌ – ಸಿಎಂ ಆಗಿ ಡಿಕೆಶಿ ಮೊದಲ ಘೋಷಣೆ

Spread the love

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೂತನ ಸಿಎಂ ಡಿಕೆ ಶಿವಕುಮಾರ್‌  ಸಿಹಿ ಸುದ್ದಿ ಕೊಟ್ಟಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿಂದು ಮೊದಲ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದಾರೆ.

ಇಷ್ಟು ದಿನ ವಿದ್ಯಾರ್ಥಿನಿಯರಿಗೆ ಮಾತ್ರ ನೀಡುತ್ತಿದ್ದ ಬಸ್‌ ಪಾಸ್‌ಗಳನ್ನ ಶಾಲಾ ಬಾಲಕರು, ಕಾಲೇಜು ಯುವಕರಿಗೂ ವಿಸ್ತರಣೆ ಮಾಡಲು ನಿರ್ಧರಿಸಿದ್ದೇವೆ. ಆದ್ರೆ ಅವರು ವಿದ್ಯಾರ್ಥಿಗಳು ಅಂತ ತಿಳಿಯೋಕೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಎಷ್ಟು ಸಾವಿರ ಕೋಟಿ ಕೋಟಿಯಾದ್ರೂ ನಾವು ಇದನ್ನೂ ಮಾಡುತ್ತೇವೆ. ವಿದ್ಯಾರ್ಥಿಗಳಿಗೂ ಯಾರೇ ಇರಲಿ ಅವರಿಗೆ ಉಚಿತ ಬಸ್‌ ಪಾಸ್‌ ಕೊಡಬೇಕು ಅಂತ ತೀರ್ಮಾನಿಸಿರುವುದಾಗಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ