Breaking News

ಇಂದಿರಾ ಕ್ಯಾಂಟೀನ್‌ನಲ್ಲಿ ಕೊಳೆತ ತರಕಾರಿ ಬಳಕೆ

Spread the love

ಮುಗಳಖೋಡ: ಪುರಸಭೆ ಎದುರು ಇರುವ ಇಂದಿರಾ ಕ್ಯಾಂಟಿನ್ ಆಹಾರ ತಯಾರಿಕೆ ಘಟಕದಲ್ಲಿ ಕೊಳೆತ ತರಕಾರಿ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆದಿದೆ.
ಈ ಕುರಿತು ಪ್ರಶ್ನಿಸಿದಾಗ ಸಂಬಂಧಪಟ್ಟ ಸಿಬ್ಬಂದಿ ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ನಾಗರಿಕರು ನೀಡಿದ ದೂರಿಗೆ ಪ್ರತಿಕ್ರಿಯಿಸಿದ ಪುರಸಭೆ ಮುಖ್ಯಾಧಿಕಾರಿ ಮಹೇಶ ಪವಾಡಿಶೆಟ್ಟಿ, ನಾಳೆ ಗುತ್ತಿಗೆದಾರರನ್ನು ಕರೆಯಿಸಿ ಇಂದಿರಾ ಕ್ಯಾಂಟೀನ್‌ಗೆ ಬರುವ ಗ್ರಾಹಕರಿಗೆ ಪರಿಶುದ್ಧ ಆಹಾರ ನೀಡಬೇಕು. ಇಲ್ಲದೇ ಹೋದರೆ ಟೆಂಡರ್ ರದ್ದುಪಡಿಸುವ ಎಚ್ಚರಿಕೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮಸ್ಥರ ಆಗ್ರಹದ ಮೇರೆಗೆ ಪುರಸಭೆ ಸಿಬ್ಬಂದಿ ಇಂದಿರಾ ಕ್ಯಾಂಟೀನ್‌ಗೆ ಬೀಗ ಹಾಕಿದರು. ಗ್ರಾಮಸ್ಥರಾದ ಚೇತನ ಯಡವನ್ನವರ, ರೈತ ಮುಖಂಡರಾದ ಶ್ರೀಶೈಲ ಅಂಗಡಿ, ಸುರೇಶ ಹೊಸಪೇಟಿ, ಕರೆಪ್ಪ ಮಂಟೂರ, ದುಂಡಪ್ಪ ಹಿಪ್ಪರಗಿ, ಅಶೋಕ ಕದಂ, ಅಣ್ಣಪ್ಪ ನಾವಿ, ಮಾರುತಿ ನಾವಿ, ಭೀಮಪ್ಪ ಯಡವನ್ನವರ ಇತರರಿದ್ದರು.

Spread the love

About Laxminews 24x7

Check Also

ಕೊಲ್ಹಾಪುರದ ಸಿದ್ಧಗಿರಿ ಆಸ್ಪತ್ರೆಯಲ್ಲಿ ಅಪರೂಪದ 17 ಗಂಟೆಗಳ ‘ಬ್ರೈನ್ ಬೈಪಾಸ್’ ಶಸ್ತ್ರಚಿಕಿತ್ಸೆ ಯಶಸ್ವಿ,ಪ್ರಖ್ಯಾತ ನರಶಸ್ತ್ರಚಿಕಿತ್ಸಕ ಡಾ. ಶಿವಶಂಕರ ಮರಜಕ್ಕೆ ಮತ್ತು ತಂಡದ ಐತಿಹಾಸಿಕ ಸಾಧನೆ

Spread the love ಕೊಲ್ಹಾಪುರ:ವೈದ್ಯಕೀಯ ಲೋಕವೇ ಬೆರಗಾಗುವಂತಹ ಅಪರೂಪದ ಮತ್ತು ಅತ್ಯಂತ ಸಂಕೀರ್ಣವಾದ ಬ್ರೈನ್ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ