Breaking News

ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ ಭೇಟಿಯಾದ ಸಿಎಂ – ಮನವೊಲಿಕೆಗೆ ಯತ್ನ

Spread the love

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾಗಿದ್ದಾರೆ.

ಕೋರಮಂಗಲದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿಯನ್ನು ಸಿಎಂ ಭೇಟಿ ಮಾಡಿದ್ದಾರೆ. ಖುದ್ದು ಮನವೊಲಿಕೆಗೆ ಪ್ರಯತ್ನಿದ್ದಾರೆ.

ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಹೈಕಮಾಂಡ್ ಅವರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ನಾನು ಸಿಗೋಕೆ ಊರಲ್ಲಿ ಇರಲಿಲ್ಲ. ತಮಿಳುನಾಡಿನ ಧರ್ಮಪುರಿಗೆ ಸಮಾರಂಭಕ್ಕೆ ಹೋಗಿದ್ದೆ. ಖಾತೆ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದರು.

ತಾವು ಬಯಸಿದ ಖಾತೆಯನ್ನು ಬಿಟ್ಟು ಬೇರೆ ಖಾತೆ ಕೊಟ್ಟಿದ್ದಾರೆಂದು ಬೇಸರಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ