ಧಾರವಾಡ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ರೈತರು ಬಿತ್ತನೆ ಕಾರ್ಯ ಮಾಡಲು ಹವಾಮಾನ ಇಲಾಖೆ ವಿಜ್ಞಾನಿಗಳು ಸೂಚನೆ ನೀಡಿದ್ದಾರೆ.
ಕೇರಳಕ್ಕೆ ಮುಂಗಾರು ಮಳೆ ತಡವಾಗಿ ಪ್ರವೇಶವಾದರೂ, ರಾಜ್ಯಕ್ಕೆ ಸಮಯಕ್ಕೆ ಸರಿಯಾಗಿ ಪ್ರವೇಶವಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾದ್ಯತೆ ಇದೆ. ಉಳಿದ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ವಿವಿಯ ಹವಾಮಾನ ಇಲಾಖೆ ವರದಿ ಮಾಡಿದೆ.