Breaking News

ಸಹಾಯಕ ಪ್ರಾಧ್ಯಾಪಕಿಯ ನಿಗೂಢ ಹತ್ಯೆ

Spread the love

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಯೊಬ್ಬರ ನಿಗೂಢ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಶಿವಾಜಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ದೇವಸ್ಮಿತಾ ಪೌಲ್‌ ಕೊಲೆಯಾದ ದುರ್ದೈವಿ. ಇವರು ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನ ಸತ್ಯಂ ಅಪಾರ್ಟ್ಮೆಂಟ್‌ನಲ್ಲಿ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಇವರ ಪತಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ.

ಗುರುವಾರ ಮಧ್ಯಾಹ್ನ 2:25 ರ ಸುಮಾರಿಗೆ ದೇವಸ್ಮಿತಾ ಪೌಲ್‌ ಸಹೋದರಿ ದೇವಾರತಿ ನ್ಯೂ ಅಶೋಕ್ ನಗರ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆಯ ಮಾಹಿತಿ ನೀಡಿದ್ದಾರೆ. ಮುಂಜಾನೆಯಿಂದ ಫ್ಲಾಟ್ ಹೊರಗಿನಿಂದ ಲಾಕ್ ಆಗಿತ್ತು. ಆಗ ದೇವಸ್ಮಿತಾಗೆ ಕರೆ ಮಾಡಲಾಗಿದೆ. ಸುಮಾರು ಬಾರಿ ಕರೆ ಮಾಡಿದರೂ, ಆಕೆ ಉತ್ತರಿಸಿಲ್ಲ. ಇದರಿಂದ ಆತಂಕಗೊಂಡ ಸಹೋದರಿ ದೇವಾರತಿ ಫ್ಲಾಟ್ ಬೀಗ ಮುರಿದು ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ದೇವಸ್ಮಿತಾ ಅವರ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಗಂಭೀರ ಗಾಯವಾಗಿದೆ. ಅಷ್ಟೇ ಅಲ್ಲದೆ ಅವರ ಮಣಿಕಟ್ಟಿನ ನರಗಳನ್ನು ಕೂಡ ಕತ್ತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಅರಣ್ಯ ಇಲಾಖೆಯಿಂದ ಶಾಕ್ – ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ರೇಟ್ ಡಬಲ್

Spread the loveಚಾಮರಾಜನಗರ: ಅರಣ್ಯ ಇಲಾಖೆಯು ಸಫಾರಿ ಮಾಡೋರಿಗೆ ಶಾಕ್ ನೀಡಿದ್ದು, ಪ್ರಸಿದ್ಧ ಬಂಡೀಪುರ, ನಾಗರಹೊಳೆಯಲ್ಲಿ  ಸಫಾರಿ ದರವನ್ನು  ಬಹುತೇಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ