Breaking News

ಮೋದಿ ಸರ್ಕಾರ ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ: ಕೇಂದ್ರದ ವಿರುದ್ಧ ಯತೀಂದ್ರ ಕಿಡಿ

Spread the love

ಕಾಳಜಿ ಇಲ್ಲದೆ, ಜನರು ಹಾಳಾಗಿ ಹೋಗ್ಲಿ ಅಂತಾ bjp ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವಾಗಲೂ ಜನವಿರೋಧಿ ನೀತಿಯನ್ನ ಅನುಸರಿಸಿಕೊಂಡು ಬಂದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಕೂಡ ಜನರಿಗೆ ಲಾಭ ಆಗುವ ಹಾಗೆ ಮಾಡಲಿಲ್ಲ. ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಕೂಡ ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದ್ದರು. ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಜಾಸ್ತಿ ಆಗಿದೆ. ಈಗ ಬೆಲೆ ಜಾಸ್ತಿ ಮಾಡಿದ್ದಾರೆ. ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗ ಜನರಿಗೆ ಬೆಲೆ ಕಡಿಮೆ ಮಾಡಿದ್ರೆ ಜನರಿಗೆ ಹೊರೆ ಆಗುತ್ತಿರಲಿಲ್ಲ. ಇದು ಜನರಿಗೆ ಹೊರೆ ಆಗುತ್ತೆ, ಇದರಿಂದ ಆರ್ಥಿಕ ವ್ಯವಸ್ಥೆ ಮೇಲೂ ಪರಿಣಾಮ ಬೀರುತ್ತದೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಕಾಕ್ರೋಚ್ ಜನತಾ ಪಕ್ಷದವರ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡಲು ಅವಕಾಶ ಇದೆ, ಹಕ್ಕಿದೆ. ಅವರು ಒಳ್ಳೆಯ ಉದ್ದೇಶ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಾಗಿ ಅವರು ಪ್ರತಿಭಟನೆ ಮಾಡಲಿ ಎಂದು ಬ್ಯಾಟ್ ಬೀಸಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ