Breaking News

ಭದ್ರಾವತಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

Spread the love

‎ಶಿವಮೊಗ್ಗ: ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭದ್ರಾವತಿಯ  ಅನ್ವರ್ ಕಾಲೋನಿಯಲ್ಲಿ ನಡೆದಿದೆ.

‎ನಗರದ ಹಳದಮ್ಮ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ಯುವಕ. ಅಂಗಡಿಗೆ ಟೀ ಕುಡಿಯಲು ಹೋಗಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ.

‎ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ಎರಡು ಕೈಗಳು ತುಂಡಾಗುವ ಹಂತಕ್ಕೆ ತಲುಪಿವೆ. ಗಂಭೀರವಾಗಿ ಗಾಯಗೊಂಡಿದ್ದ ಆತನಿಗೆ ಭದ್ರಾವತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ