Breaking News

ರೇಣುಕಾಸ್ವಾಮಿ ಕೊಲೆ ಕೇಸ್‌ – ದರ್ಶನ್ ಅರೆಸ್ಟ್ ಆಗಿ 2 ವರ್ಷ

Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಅರೆಸ್ಟ್ ಆಗಿ (ಜೂ.11) 2 ವರ್ಷ ಪೂರೈಸಲಿದೆ.

ಕೊಲೆ ಕೇಸಲ್ಲಿ 2024 ಜೂನ್ 11ರಂದು ಮೈಸೂರಿನಲ್ಲಿ ಹೋಟೆಲ್‌ನಲ್ಲಿದ್ದಾಗಲೇ ಅರೆಸ್ಟ್ ಮಾಡಲಾಗಿತ್ತು. 1 ಬಾರಿ ಮಧ್ಯಂತರ ಜಾಮೀನು  ಪಡೆದು ಹೊರಬಂದಿದ್ದರು. ಅದಾದ ಬಳಿಕ ಸುಪ್ರೀಂನಲ್ಲಿ ಜಾಮೀನು ರದ್ದಾದ ಹಿನ್ನೆಲೆ ದರ್ಶನ್ ಸೇರಿ 7 ಆರೋಪಿಗಳು ಮತ್ತೆ ಜೈಲುಪಾಲಾಗಿದ್ದಾರೆ.

ಇನ್ನು, ದರ್ಶನ್ ಸಹಚರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳ ಜಾಮೀನು ರದ್ದು ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾ ಮಾಡಿದೆ.

ಪ್ರಕರಣದಲ್ಲಿ ಭಾಗಿಯಾಗಿದ್ದ ಎ-3 ಪವನ್, ಎ-4 ರಾಘವೇಂದ್ರ, ಎ-5-ನಂದೀಶ್, ಎ-9 ಧನರಾಜು ಹಾಗೂ ಎ-10 ವಿನಯ್ ಸೇರಿ ಜಾಮೀನಿಗಾಗಿ ಅರ್ಜಿ ಸಲ್ಲಿದ್ದರು. ಈ ಮಧ್ಯೆ, ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಮತ್ತೆ ಕಿಡಿಗೇಡಿಗಳ ಕಾಟ ಮುಂದುವರೆದಿದೆ. ಸೋಷಿಯಲ್‌ ಮೀಡಿಯಾದಲ್ಲಿ ವಿಜಯಲಕ್ಷ್ಮಿ ಮೂವಿಗೆ ಹೋದ ವಿಡಿಯೋ ಹಾಕಿ ಕೆಟ್ಟ ಕಾಮೆಂಟ್ ಮಾಡುವ ಮೂಲಕ ನಿಂದನೆ ಮಾಡಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ