Breaking News

ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ ರವಿ

Spread the love

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ  ಆಗ ಇಲ್ಲದ ಕಂಡಿಷನ್ ಈಗ ಯಾಕೆ? ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಕಾ ಪಾಟೀಲ್ ನಿಂಗೂ ಫ್ರೀ, ಜಮೀರ್ ಅಹ್ಮದ್, ಮಹದೇವಪ್ಪ ನಿಂಗೂ ಫ್ರೀ ಎಂದು ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯನವರು ತಿಳಿಸಿದ್ದರು ಎಂದು ಗಮನ ಸೆಳೆದರು. 10 ಕೆಜಿ ಅಕ್ಕಿ ಕೊಟ್ಟಿದ್ದೀರಾ? ಮೋದಿಯವರು 5 ಕೆಜಿ ಅಕ್ಕಿ ಕೊಡದೇ ಇದ್ದರೆ, ನಿಮ್ಮನ್ನೇ ನಂಬಿದ್ದರೆ ಜನರು ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಮಲಗಬೇಕಿತ್ತು. ನಿಮ್ಮ ಕಂಡಿಷನ್ ಯಾಕೆ, ಖಜಾನೆ ಖಾಲಿ ಎಂಬುದು ಜನರಿಗೆ ಗೊತ್ತಿದೆ ಎಂದು ತಿಳಿಸಿದರು.

ಫಲಾನುಭವಿ ಜನರನ್ನು ಕಡಿಮೆ ಮಾಡಲು ಕಂಡಿಷನ್ ಹಾಕುತ್ತೀರಿ. ನಿಮ್ಮ ಹಳೆ ಭಾಷಣವನ್ನು ಜನರು ಕೇಳಿಸಿಕೊಳ್ಳುತ್ತಾರೆ ಎಂದರು. ಇದಕ್ಕೆ ಸೂಕ್ತ ಸಮಯದಲ್ಲಿ ಜನರು ಉತ್ತರ ಕೊಡುತ್ತಾರೆ ಎಂದು ಹೇಳಿದರು. ನಮಗೂ ಗ್ಯಾರಂಟಿ ಯೋಜನೆಗಳಿಗೂ ಸಂಬಂಧ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದರೆ, ನಾವು ಪ್ರಶ್ನೆ ಮಾಡುವುದಿಲ್ಲ ಎಂದು ಸವಾಲು ಹಾಕಿದರು.

ಗೃಹಲಕ್ಷ್ಮಿ ಕೊಡಬೇಕಾಗುತ್ತದೆ ಎಂದು ಹೊಸ ಬಿಪಿಎಲ್ ಕಾರ್ಡ್ ಕೊಡುವುದನ್ನೂ ನಿಲ್ಲಿಸಿದ್ದಾರೆ. ಇದರಿಂದಾಗಿ ಅರ್ಹ ಫಲಾನುಭವಿಗಳು ಬಿಪಿಎಲ್ ಕಾರ್ಡ್‌ನಿಂದಲೂ ವಂಚಿತರಾಗಿದ್ದಾರೆ. ಇದು ಸರಿಯಲ್ಲ ಎಂದರು.

ಸಚಿವ ಸ್ಥಾನ ಹಂಚಿಕೆ ಕುರಿತು ಪ್ರತಿಕ್ರಿಯಿಸಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎಂಬ ನೀತಿಯೇ ಜಾತ್ಯತೀತತೆಯೇ? ಅಹಿಂದದೊಳಗೆ ಒಂದು ಜಾತಿ ಮಾತ್ರ ಇದೆಯೇ ಎಂದು ಕೇಳಿದರು. ಎಲ್ಲ ಜಾತಿಯವರಿಗೂ ಸಮಾನ ಅವಕಾಶ ಎಂಬುದು ಜಾತ್ಯತೀತತೆ ಎಂದು ನಾನು ಭಾವಿಸಿದ್ದೇನೆ ಎಂದು ನುಡಿದರು.

ರಾಜ್ಯದಲ್ಲಿ ರಸಗೊಬ್ಬರ ಬೇಡಿಕೆಗೆ ಅನುಗುಣವಾಗಿ ಸ್ಟಾಕ್ ಇದೆ ಎಂದು ಹಿಂದಿನ ಕೃಷಿ ಸಚಿವರು ಹೇಳಿಕೆ ನೀಡಿದ್ದರು. ಹಾಗಿದ್ದರೆ ಕೊರತೆ ಹೇಗೆ? ಯಾಕೆ ಕಾಳಸಂತೆಯಲ್ಲಿ ಮಾರಾಟ ಆಗುತ್ತಿದೆ ಎಂಬುದಕ್ಕೆ ಹೊಸ ಸರ್ಕಾರ ಮತ್ತು ಅಧಿಕಾರಿಗಳು ಉತ್ತರ ಕೊಡಲಿ. ಯೂರಿಯ ಕೇರಳ, ತಮಿಳುನಾಡಿಗೆ ಹೋಗುವ ದೂರು ಇದೆ. ಅದರ ಕಡೆ ಗಮನಿಸಿ, ರೈತರಿಗೆ ಸಮರ್ಪಕವಾಗಿ ಗೊಬ್ಬರ ಸಿಗುವಂತೆ ನೋಡಿಕೊಳ್ಳಿ. ಕಾಳಸಂತೆಯಲ್ಲಿ ಫ್ಯಾಕ್ಟರಿಗೆ ಸರಬರಾಜು ಮಾಡಲು ಅವಕಾಶ ಕೊಡದಿರಿ ಎಂದು ಒತ್ತಾಯಿಸಿದರು.

ಡಿ.ಕೆ.ಶಿವಕುಮಾರ್ ಅವರು ನೀತಿ ಆಯೋಗದ ಸಭೆಗೆ ಹಾಜರಾಗುವ ಕುರಿತು ಮಾತನಾಡಿದ ಅವರು, ನೀತಿ ಆಯೋಗದ ಸಭೆಗೆ ಹೋಗುವುದು ಮತ್ತು ಹೋಗದೇ ಇರುವುದರಿಂದ ಆಗುವ ವ್ಯತ್ಯಾಸ ಈಗ ಕಾಂಗ್ರೆಸ್ಸಿಗೆ ಗೊತ್ತಾಗಿದೆ. ಅವರು ಹೋಗಿದ್ದು ಸೂಕ್ತ ಇದೆ. ಈಗಲಾದರೂ ತಡವಾಗಿಯಾದರೂ ಕಾಂಗ್ರೆಸ್ ಎಚ್ಚೆತ್ತುಕೊಂಡಿದ್ದು ಸ್ವಾಗತಾರ್ಹ ಎಂದರು. ಪೊಲೀಸ್ ಕೇಸಿನ ಮೂಲಕ ಪ್ರತಿಭಟಿಸುವ ಹಕ್ಕನ್ನು ಮೊಟಕುಗೊಳಿಸುವ ಯಾರೂ ಯಶಸ್ವಿ ಆಗಿಲ್ಲ. ರೈತವಿರೋಧಿ ಸರ್ಕಾರ ಮತ್ತೆ ಆಡಳಿತಕ್ಕೆ ಬರುವುದಿಲ್ಲ ಎಂದು ತಿಳಿಸಿದರು.


Spread the love

About Laxminews 24x7

Check Also

ಲವ್ವರ್‌ಗೆ ಮೆಸೆಜ್‌ ಮಾಡಿ ಕರೆಸಿ ಮಾರಣಾಂತಿಕ ಹಲ್ಲೆ – ಯುವತಿಯ ಪೋಷಕರ ವಿರುದ್ಧ ಎಫ್‌ಐಆರ್‌

Spread the loveತುಮಕೂರು: ಕಾಲೇಜು ಯುವತಿಯನ್ನು ಪ್ರೀತಿಸುತ್ತಿದ್ದ ಪೌರ ಕಾರ್ಮಿಕ ಯುವಕನಿಗೆ ಯುವತಿಯ ಪೋಷಕರು ಮನಸೋ ಇಚ್ಛೆ ಥಳಿಸಿದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ