Breaking News

ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ

Spread the love

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ  ಸ್ಪರ್ಧಿಸಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಅಧಿಕೃತ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ , ಪವನ್‌ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೊ. ನಾಗರಾಜ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪವನ್‌ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಪ್ರೊ. ನಾಗರಾಜ್‌ ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಖರ್ಗೆ ಅವರು ದೆಹಲಿಯಲ್ಲಿರುವ ಕಾರಣ ಬೆಂಗಳೂರಿಗೆ ವಾಪಸ್‌ ಆದ ಬಳಿಕ ಪ್ರಮಾಣ ಪತ್ರ ಪಡೆದುಕೊಳ್ಳಲಿದ್ದಾರೆ.

ರಾಜ್ಯಸಭೆಗೆ ನೂತನ ಸದಸ್ಯರಾಗಿ ಆಯ್ಕೆಯಾದ ಬೆನ್ನಲ್ಲೇ ಕಾಂಗ್ರೆಸ್‌ ಸದಸ್ಯ ಪವನ್ ಖೇರಾ ಮಾತನಾಡಿ, ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿದ್ದಕ್ಕೆ ಖುಷಿ ಇದೆ. ಕನ್ನಡ ಸುಂದರ ಭಾಷೆ, ಮುಂದೆ ನಾನು ಬರುವಾಗ ಕನ್ನಡ ಕಲಿತುಕೊಂಡು ಬರುತ್ತೇನೆ ಎಂದು ಶಪಥ ಮಾಡಿದರು.

ಖರ್ಗೆ ದೆಹಲಿಯಲ್ಲಿ ಇದ್ದಾರೆ, ಬೆಂಗಳೂರಿಗೆ ವಾಪಸ್ ಆದ ಬಳಿಕ ಪ್ರಮಾಣ ಪತ್ರ ಪಡೆಯಲಿದ್ದಾರೆ ಎಂದು ತಿಳಿಸಿದ್ರು. ಇನ್ನೂ ರಾಜ್ಯಸಭಾ ಸದಸ್ಯರಾಗಿ ಮನ್ಸೂರು ಅಲಿ ಖಾನ್ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡುತ್ತಿದ್ದಂತೆ ಬೆಂಬಲಿಗರು ಕುಣಿದು ಕುಪ್ಪಳಿಸಿದರು. ವಿಧಾನಸೌಧದ ಹೊರಗಡೆ ಪೋಸ್ಟರ್ ಹಿಡಿದು, ಪಟಾಕಿ ಸಿಡಿಸಿ ಸಂಭ್ರಮಿಸಿದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ