Breaking News

4500ಕೋಟಿ ವಂಚನೆ ಪ್ರಕರಣ: ಆರೋಪಿ ಶಿವಾನಂದ ನೀಲಣ್ಣವರಗೆ ಜಾಮೀನು ಮಂಜೂರು

Spread the love

 ಬೆಳಗಾವಿಯಲ್ಲಿ 4500 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

ಬೆಂಗಳೂರು 92ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ‌ ಶಿವಾನಂದ ನೀಲವಣ್ಣವರ್ ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ದೇಶ ಬಿಟ್ಟು ಹೋಗಬಾರದು, ಸಾಕ್ಷಿ ನಾಶ ಮಾಡಬಾರದು, ಅರ್ಜಿದಾರರು ತಲೆಮರೆಸಿಕೊಂಡು ಹೋಗುವಂತಿಲ್ಲ ಎಂದು ಶಿವಾನಂದ ನೀಲಣ್ಣವರಗೆ ಕೋರ್ಟ್ ಸೂಚನೆ ನೀಡಿದೆ.

ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಅಥವಾ ಮಂಗಳವಾರ ಶಿವಾನಂದ ನೀಲಣ್ಣವರ ಬಿಡುಗಡೆಯಾಗುವ ಸಾಧ್ಯತೆಯಿದೆ.

ಸದ್ಯ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರೋ ಶಿವಾನಂದ ನೀಲಣ್ಣವರ ಸಾರ್ವಜನಿಕರು, ಮಾಜಿ ಸೈನಿಕರಿಂದ ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಸಾವಿರಾರು ಕೋಟಿ ರೂಪಾಯಿ ಹಣ ಸಂಗ್ರಹಿಸಿ ವಂಚಿಸಿರುವ ಆರೋಪವಿದೆ. ಈ ಹಿನ್ನೆಲೆಯಲ್ಲಿ ಶಿವಾನಂದ್ ನೀವಣ್ಣರ್ ನನ್ನು ಬಂಧಿಸಲಾಗಿತ್ತು.

ಶಿವಾನಂದ ನೀಲಣ್ಣವರ ಪರ ವಕೀಲ ಆರ್ ಜಿ ಪಾಟೀಲ, ಸುಧೀರ್ ನಿರ್ವಾಣಿ ವಕಾಲತ್ತು ವಹಿಸಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ