Breaking News

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಯುವತಿ ದುರ್ಮರಣ

Spread the love

ಬೆಂಗಳೂರು: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ  ನಡೆದಿದೆ.

ಹೊಸಕೋಟೆ  ಸಮೀಪದ ದೊಡ್ಡ ಹುಲ್ಲೂರು ಬಳಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೆಂಜ್ ಕಾರು  ಸಂಪೂರ್ಣ ನಜ್ಜುಗುಜ್ಜಾಗಿದ್ದು, ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ