Breaking News

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಕ್ಕು ಗಾಯಗೊಂಡ ಹುಲಿ ಓಡಾಟ – ಪ್ರವಾಸಿಗರಿಗೆ ಎಚ್ಚರಿಕೆ

Spread the love

ಚಿಕ್ಕಮಗಳೂರು: ಮುಳ್ಳಯ್ಯನಗಿರಿ  ತಪ್ಪಲಿನಲ್ಲಿ ಉರುಳಿಗೆ ಸಿಕ್ಕು ಗಾಯಗೊಂಡ ಹುಲಿ ಓಡಾಡುತ್ತಿದ್ದು, ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಜ್ರಾಗ್ರತೆಯಿಂದ ಇರುವಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಹುಲಿಯ ಸೊಂಟದಲ್ಲಿ ಉರುಳು ನೇತಾಡುತ್ತಿದೆ. ಇದರಿಂದ ಗಾಯಗೊಂಡ ಹುಲಿ, ನೋವಿನಿಂದಲೇ ಕಳೆದ ನಾಲ್ಕೈದು ದಿನಗಳಿಂದ ಓಡಾಡುತ್ತಿದೆ. ಆ ನೋವಿನಲ್ಲೂ ಜಿಂಕೆ ಹಾಗೂ ಕಡವೆಯನ್ನು ಹುಲಿ ಬೇಟೆಯಾಡಿದೆ. ಸುತ್ತಮುತ್ತ ಪ್ರಾಣಿಗಳ ಕಳೆಬರಹ ಪತ್ತೆಯಾಗಿವೆ.

ಮೂರ್ನಾಲ್ಕು ದಿನದಿಂದ ಹುಲಿ ಸೆರೆಗೆ ಅರಣ್ಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಕ್ಯಾಮೆರಾಗಳನ್ನು ಅಳವಡಿಸಿ ಹುಲಿಯ ಚಲನವಲನಗಳನ್ನು ಗಮನಿಸುತ್ತಿದ್ದಾರೆ. ತೋಟದ ಕಾರ್ಮಿಕರು ಕೆಲಸಕ್ಕೆ ಹೋಗದಂತೆ ಅರಣ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ. ಅಲ್ಲದೇ ರಸ್ತೆಯಲ್ಲಿ ಓಡಾಡಲು ಪಂಡರವಳ್ಳಿ, ಕೊಳಗಾಮೆ, ಏಳುನೂರ್ ಖಾನ್ ಗ್ರಾಮಸ್ಥರು ಹೆದರುತ್ತಿದ್ದಾರೆ.

ಉರುಳು ಹಾಕಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪರಿಸರವಾದಿಗಳು, ಗ್ರಾಮಸ್ಥರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ