Breaking News

ಬಾಸ್ ಚಿತ್ರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್,ವಿಜಯಲಕ್ಷ್ಮೀ

Spread the love

ಬೆಂಗಳೂರು: ಜೂನ್ 19ರಂದು ರಾಜ್ಯಾದ್ಯಂತ ಬಿಡುಗಡೆ ಆಗಬೇಕಿದ್ದ ಬಹುಚರ್ಚಿತ ಬಾಸ್ (Boss) ಚಲನಚಿತ್ರಕ್ಕೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಅವರು ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ನಗರ ಸಿವಿಲ್ ನ್ಯಾಯಾಲಯವು ಈ ಹಿಂದೆ ಚಿತ್ರದ ಬಿಡುಗಡೆಗೆ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿ ಬಿಡುಗಡೆಗೆ ಅವಕಾಶ ನೀಡಿತ್ತು. ಅದರ ಬೆನ್ನಲ್ಲೇ ಚಿತ್ರತಂಡವು ಜೂನ್ 19ರಂದು ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಸದ್ಯಕ್ಕೆ ಬಿಡುಗಡೆ ಆಗುವುದು ಬಹುತೇಕ ಅನುಮಾನ.

ಸಿವಿಲ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿರುವ ಅರ್ಜಿದಾರರು, ಚಿತ್ರದ ಬಿಡುಗಡೆಗೆ ತಕ್ಷಣದ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಚಿತ್ರದ ಕಥಾವಸ್ತು, ಪಾತ್ರಗಳ ನಿರೂಪಣೆ ಹಾಗೂ ಇತರ ವಿವಾದಿತ ಅಂಶಗಳಿಗೆ ಸಂಬಂಧಿಸಿದಂತೆ ಗಂಭೀರ ಆಕ್ಷೇಪಣೆಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಬಾಸ್ ಸಿನಿಮಾದ ಕಥೆಯು ರೇಣುಕಾಸ್ವಾಮಿ  ಕೊಲೆಯ ಹಿನ್ನೆಲೆಯಾಗಿ ಬಂದಿರುವ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಾಗಿಯೇ ದರ್ಶನ್ ಕುಟುಂಬ ಸಿನಿಮಾಗೆ ತಡೆಯಾಜ್ಞೆ ತರುತ್ತಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ