Breaking News

ಪಕ್ಷ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು

Spread the love

ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಲ್ಲರೂ ಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು. ಬಿಎಲ್‌ಒ-2 ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಪ್ರತಿಯೊಬ್ಬ ಮತದಾರರ ಮಾಹಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ನಗರಸಭೆ ಸಮುದಾಯ ಭವನದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿಂದ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಕರೆಯಲಾಗಿದ್ದ ಎಸ್‌ಐಆರ್ ವಿಶೇಷ ಸಭೆಯಲ್ಲಿ ಮಾತನಾಡಿ, ಬೂತ್ ಮಟ್ಟದಲ್ಲಿ ನೇಮಕಗೊಂಡಿರುವ ಬಿಎಲ್‌ಎ-2 ಕಾರ್ಯಕರ್ತರು ಒಂದೇ ಹೆಸರಿನ ಹಲವು ವ್ಯಕ್ತಿಗಳು ಒಂದೇ ಗ್ರಾಮ ಅಥವಾ ಪ್ರದೇಶದಲ್ಲಿ ವಾಸಿಸುವ ಸಂದರ್ಭಗಳಲ್ಲಿ ಹೆಸರು, ತಂದೆಯ ಹೆಸರು, ವಿಳಾಸ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಸರಿಯಾಗಿ ದಾಖಲಿಸಬೇಕು. ಪಕ್ಷ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು ಎಂದರು.
ವಿಭಾಗ ಪ್ರಭಾರ ಸಂಜಯ ಪಾಟೀಲ, ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಶಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಬಿಎಲ್‌ಒ-1 ಮಾಣಿಕ ಹಿರಟ್ಟಿ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ರಾಜಶ್ರೀ ಒಡೆಯರ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಬಿಜೆಪಿ ಮುಖಂಡ ಪ್ರಮೋದ ಜೋಶಿ, ಡಾ.ಕೆ.ವಿ.ಪಾಟೀಲ, ಸುರೇಶ ಪಾಟೀಲ, ಸುರೇಶ ಪತ್ತಾರ ಸೇರಿದಂತೆ ಹಲವಾರು ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ