Breaking News

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the love

ಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  ತಿರುಗೇಟು ನೀಡಿದ್ದಾರೆ.

ವಿಧಾನ ಪರಿಷತ್  ಚುನಾವಣೆಗಾಗಿ ಜೆಡಿಎಸ್‌ನಿಂದ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಸೆಳೆಯೋ ಪ್ರಯತ್ನ ನಡೆಯುತ್ತಿದೆ ಎಂಬ ಸಿಎಂ ಡಿಕೆ ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವೇನು ಆಪರೇಷನ್ ಮಾಡೋಣ? ನಮ್ಮದು ಸಣ್ಣ ಪಕ್ಷ. ನಮ್ಮ ಪಕ್ಷದಲ್ಲಿ, ನಮ್ಮ ಕೈಯಲ್ಲಿ ಮಾಡೋಕೆ ಏನಿದೆ? ಸರ್ಕಾರ ಅವರ ಕೈಯಲ್ಲಿದೆ. ಮ್ಯಾನ್ ಪವರ್, ಮಸಲ್ ಪವರ್, ಹಣದ ಪವರ್ ಎಲ್ಲ ಇಟ್ಟುಕೊಂಡಿದ್ದಾರೆ. ಅವರ ವಿರುದ್ಧ ನಾವು ಫೈಟ್ ಮಾಡೋಕೆ ಆಗುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ.

ನಮ್ಮ ಪಕ್ಷದ ಮತಗಳು ಚೆಲ್ಲಾಪಿಲ್ಲಿ ಆಗಬಾರದು. ನಮ್ಮ ಮತ ಒಟ್ಟಾಗಿ ಇರಬೇಕು ಅಂತ ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. ಕುತಂತ್ರ ಮಾಡಿ ಗೆದ್ದೇ ಬಿಡಬೇಕು ಅನ್ನೋ ಪ್ರಶ್ನೆ ಇಲ್ಲ. ನಮ್ಮ ಅಭ್ಯರ್ಥಿ ಅರ್ಜಿ ಹಾಕುವಾಗ ಆತ್ಮಸಾಕ್ಷಿಯಿಂದ ಮತ ಕೊಡಿ ಅಂತ ಕೇಳಿದ್ದಾರೆ. ಇದನ್ನ ಹೊರತುಪಡಿಸಿ ಇನ್ನೇನಿದೆ. ನಮ್ಮ ವೋಟ್ ಜೊತೆ ಬಿಜೆಪಿ ವೋಟ್ ಇದೆ. ಅದಕ್ಕೆ ಮನವಿ ಮಾಡಿದ್ದೇವೆ. ನಮ್ಮ ವೋಟ್ ಭದ್ರ ಮಾಡೋಕೆ ಅಭ್ಯರ್ಥಿ ಹಾಕಿದ್ದೇವೆ ಎಂದಿದ್ದಾರೆ.

ಕಾಂಗ್ರೆಸ್ ಆಂತರಿಕ ಭಿನ್ನಮತ ಅನುಕೂಲ ಆಗಬಹುದಾ ಎಂಬ ಪ್ರಶ್ನೆಗೆ, ನೋಡೋಣ ಅದು ಭಗವಂತನ ಇಚ್ಛೆ. ಆ ರೀತಿ ಆದ್ರೆ ಸರ್ಕಾರವನ್ನ ಬಿಗಿ ಮಾಡೋಕೆ ಅನುಕೂಲ ಅನ್ನೋದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.

ಇನ್ನೂ ಇದೇ ವೇಳೆ ಕುಮಾರಸ್ವಾಮಿ ಕುಟುಂಬದ ಆಸ್ತಿ ತನಿಖೆ ಮಾಡಿಸ್ತಾರಾ ಎಂಬ ಚೆಲುವರಾಯಸ್ವಾಮಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಅವರಿಗೆಲ್ಲ ಉತ್ತರ ಕೊಡಲ್ಲ. ಅವರಿಗೆ ನಮ್ಮ ಕಾರ್ಯಕರ್ತರು ಉತ್ತರ ಕೊಡ್ತಾರೆ. ಅವರು ಎಲ್ಲಿ ಇದ್ದವರು. ಅವರ ಬಗ್ಗೆ ನಾನು ಯಾಕೆ ಚರ್ಚೆ ಮಾಡಲಿ. ಅಂತಹವರ ಬಗ್ಗೆ ಚರ್ಚೆ ಮಾಡೋದು ಅನಾವಶ್ಯಕ. ಪಾಪ ಅವರು ಚೇರ್ ಉಳಿಸಿಕೊಳ್ಳೋಕೆ ಓಡಾಡ್ತಾ ಇದ್ದಾರೆ. ಅದಕ್ಕೆ ನಾನು ಯಾಕೆ ಉತ್ತರ ಕೊಡಲಿ. ಅದಕ್ಕೆ ಏನೇನೋ ಮಾತಾಡ್ತಾರೆ ಎಂದು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ