Breaking News

ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

Spread the love

ಕಲಬುರಗಿ: ಪೊಲೀಸ್ ಸಬ್ ಇನ್ಸಪೆಕ್ಟರ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ  ನಗರದ ಗಂಗಾ ನಗರದ ನಿವಾಸದಲ್ಲಿ ನಡೆದಿದೆ.

ಕಲಬುರಗಿಯ ಡಿ.ಸಿ.ಆರ್.ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಹೆರೂರ್ ಸಾವನ್ನಪ್ಪಿದ ದುರ್ದೈವಿ.

2014ರ ಬ್ಯಾಚ್‌ನ ಪಿಎಸ್‌ಐ ಆಗಿದ್ದ ಮೃತ ಬಸವರಾಜ್ ಕಳೆದ ಎರಡು ವರ್ಷಗಳಿಂದ ಕಲಬುರಗಿಯ ಡಿ.ಸಿ.ಆರ್.ಬಿ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ (ಜೂ.16) ತಡರಾತ್ರಿ ಅವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಪಿಎಸ್‌ಐ ಬಸವರಾಜ್ ಅವರಿಂದ ಕರೆ ಬರುತ್ತಿದ್ದಂತೆ ಆತಂಕಗೊಂಡ ಸ್ನೇಹಿತರು ತಕ್ಷಣವೇ ಅವರ ತಂದೆಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಗಾಬರಿಗೊಂಡ ತಂದೆ ತಕ್ಷಣವೇ ಮಗನ ರೂಮಿನ ಬಳಿ ಧಾವಿಸಿ, ಒಳಗಿನಿಂದ ಲಾಕ್ ಆಗಿದ್ದ ಬಾಗಿಲನ್ನು ಒಡೆದು ತೆರೆದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಸವರಾಜ್ ಸೀರೆಯಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಭೀಕರ ಘಟನೆಗೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಕುರಿತು ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ