Breaking News

ರೈತರೊಬ್ಬರಿಂದ ಆರು ಸಾವಿರ ರೂಪಾಯಿ ಗಳ ಲಂಚ ಪಡೆಯುತ್ತಿದ್ದ ವೇಳೆ ಗಂಗಾವತಿ ತಹಸೀಲ್ದಾರಎಸಿಬಿ‌‌ ಬಲೆಗೆ

Spread the love

ಕೊಪ್ಪಳ:  ಜಮೀನಿನ ಖಾತಾ ಉತಾರ ಬದಲಾವಣೆಗೆ ಸಂಬಂಧಿಸಿದಂತೆ ರೈತರೊಬ್ಬರಿಂದ ಆರು ಸಾವಿರ ರೂಪಾಯಿ ಗಳ ಲಂಚ ಪಡೆಯುತ್ತಿದ್ದ ವೇಳೆ ಗಂಗಾವತಿ ತಹಸೀಲ್ದಾರ, ಮತ್ತು ಭೂಮಿ ಕೇಂದ್ರದ ತಹಸೀಲ್ದಾರ್  ‌ ಎಸಿಬಿ‌‌ ಬಲೆಗೆ ಬಿದಿದ್ದಾರೆ.

ಎಸಿಬಿ‌ ಡಿಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ  ಗಂಗಾವತಿ ತಹಸೀಲ್ದಾರ ಎಲ್.ಡಿ.ಚಂದ್ರಕಾಂತ ಹಾಗೂ ಭೂಮಿ ಕೇಂದ್ರದ ಶಿರಸ್ತೆದಾರ ಶರಣಪ್ಪ ಅವರು ವಡ್ಡರಹಟ್ಟಿಯ ಸುಂದರರಾಜ ಎಂಬ ರೈತರಿಂದ ಜಮೀನಿನ ಖಾತಾ ಬದಲಾವಣೆಗೆ ರೂ.6  ಸಾವಿರ ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, ರೈತನಿಂದ ಲಂಚ ಸ್ವೀಕರಿಸುವಾಗ ಸಿಕ್ಕುಬಿದಿದ್ದಾರೆ.

ಎಸಿಬಿ ಬಳ್ಳಾರಿ ಎಸ್ಪಿ‌ ಬಿ.ಎಸ್ ನೇಮಗೌಡ ಅವರ ಮಾರ್ಗದರ್ಶನ ನದಲ್ಲಿ ಡಿಎಸ್ಪಿ ಆರ್.ಉಜ್ಜನಕೊಪ್ಪ, ಪೊಲೀಸ್ ಇನ್ಸಪೇಕ್ಟರ್ ಎಸ್.ಎಸ್.ಬೀಳಗಿ,‌ ಗುರುರಾಜ, ಹಾಗೂ ಸಿಬ್ನಂದಿಗಳು ನಡೆಸಿದ ದಾಳಿವೇಳೆ ತಹಸೀಲ್ದಾರ ಹಾಗೂ ಶಿರಸ್ತೆದಾರರು ಬಲೆಗೆ ಒಳಗಾಗಿದ್ದು, ತನಿಖೆ ಮುಂದುವರೆದಿದೆ.

 


Spread the love

About Laxminews 24x7

Check Also

ಬಾಲ್ಯವಿವಾಹದಿಂದ ಐವರು ಬಾಲಕಿಯರ ರಕ್ಷಣೆ

Spread the loveಕೊಪ್ಪಳ: ತಾಲ್ಲೂಕಿನ ಜಿನ್ನಾಪುರ ತಾಂಡದ ದೇವಸ್ಥಾನದಲ್ಲಿ ನಿಗದಿಯಾಗಿದ್ದ ಐದು ಜನ ಬಾಲಕಿಯರ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ