Breaking News

ಅರಣ್ಯ ಸಚಿವ ಆನಂದ್ ಸಿಂಗ್ ಕಾರು ಚಾಲಕನಿಗೆ ಕೊರೊನಾ ಸೋಂಕು

Spread the love

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಚಾಲಕನಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಹೊಸಪೇಟೆ ನಗರದ ರಾಣಿಪೇಟೆಯ ಕಚೇರಿಯನ್ನು ಇಂದು ಸೀಲ್‍ಡೌನ್ ಮಾಡಲಾಗಿದೆ. ಸಚಿವ ಆನಂದ್ ಸಿಂಗ್ ಅವರ ಕಾರು ಚಾಲಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಸ್ವಯಂ ಕ್ವಾರಂಟೈನ್‍ನಲ್ಲಿರುವಂತೆ ಸೂಚಿಸಲಾಗಿದೆ. ಸೋಂಕು ತಗುಲಿದ ವಾಹನ ಚಾಲಕನನ್ನು ಹೊಸಪೇಟೆ ನಗರದ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾರು ಚಾಲಕನ ಕುಟುಂಬ ಸದಸ್ಯರನ್ನು ಸಹ ಕ್ವಾರಂಟೈನ್ ಮಾಡಲಾಗಿದೆ.

ಅಲ್ಲದೆ ಸಚಿವ ಆನಂದ್ ಸಿಂಗ್ ಅವರ ಆಪ್ತ ಸಹಾಯಕರು, ಸಚಿವರ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನೂ 14 ದಿನಗಳ ಕಾಲ ಹೋಮ್ ಕ್ವಾರಂಟೈನ್‍ನಲ್ಲಿರಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಅಲ್ಲದೆ ಸಚಿವರ ಕಚೇರಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ