Breaking News

ಪೋಕ್ಸೋ ಪ್ರಕರಣ – ರೆಗ್ಯುಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ ವಚನಾನಂದ ಸ್ವಾಮೀಜಿ

Spread the love

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ  ಆರೋಪಿಯಾಗಿರುವ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಸ್ವಾಮೀಜಿ  ದಾವಣಗೆರೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ರೆಗ್ಯುಲರ್ ಜಾಮೀನು  ಕೋರಿ ಅರ್ಜಿ ಸಲ್ಲಿಸಿದ್ದಾರೆ.

ವಚನಾನಂದ ಸ್ವಾಮೀಜಿ ತಮ್ಮ ವಕೀಲ ಎಸ್.ವಿ. ಪಾಟೀಲ್ ಹಾಗೂ ಭಕ್ತರೊಂದಿಗೆ ಖುದ್ದು ನ್ಯಾಯಾಲಯಕ್ಕೆ ಆಗಮಿಸಿ ಜಾಮೀನು ಅರ್ಜಿ ಸಲ್ಲಿಸಿದರು.

ಮಠದಲ್ಲಿದ್ದ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಾಗಿದ್ದು, ಬಳಿಕ ತನಿಖೆಗಾಗಿ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಆದರೆ, ಆ ಜಾಮೀನನ್ನು ರದ್ದುಪಡಿಸುವಂತೆ ಸಂತ್ರಸ್ತ ಬಾಲಕನ ತಾಯಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.


Spread the love

About Laxminews 24x7

Check Also

ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ – ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ ಸ್ಫೋಟ

Spread the loveಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ವೇಳೆ ಗದ್ದಲ ಗಲಾಟೆ ಜೋರಾಗಿದೆ. ಚಿಕ್ಕಬಳ್ಳಾಪುರ ನಗರದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ