Breaking News

ಕೇವಲ 500 ರೂಪಾಯಿಗಾಗಿ ಆಟೋ ಚಾಲಕನ ಹತ್ಯೆ – ಆರೋಪಿ ಅರೆಸ್ಟ್‌

Spread the love

ಹುಬ್ಬಳ್ಳಿ: 500 ರೂ. ಸಾಲದ ವಿಚಾರಕ್ಕೆ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಆಟೋ ಚಾಲಕನಾಗಿದ್ದ ಈರಣ್ಣ ಹುರಕಡ್ಲಿ (45) ಮೇಲೆ ಜೂ.25 ರಂದು ಶಶಿಧರ್ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಈರಣ್ಣ ಅವರನ್ನು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂ.28ರ ರಾತ್ರಿ ಅವರು ಮೃತಪಟ್ಟಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಈರಣ್ಣ, ಶಶಿಧರ್ ಬಳಿ 500 ರೂ. ಸಾಲ ಪಡೆದಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಶಶಿಧರ್ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಘಟನೆ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಹೆಂಡತಿ ಜಗಳವಾಡಿ ತವರಿಗೆ ಹೋಗಿದ್ದಕ್ಕೆ ಮೊಬೈಲ್ ಟವರ್ ಏರಿ ಕುಳಿತ ಪತಿ

Spread the loveಗದಗ: ಗಂಡ-ಹೆಂಡತಿ ಜಗಳ ಕೆಲವೊಮ್ಮೆ ದೊಡ್ಡ ಅವಾಂತರಕ್ಕೂ ಕಾರಣವಾಗುತ್ತದೆ. ಗದಗ  ಜಿಲ್ಲೆಯಲ್ಲಿ ಪತ್ನಿ ತವರು ಮನೆಗೆ ಹೋಗಿದ್ದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ