Breaking News

ಕೆ.ಆರ್ ಪುರಂ ತ್ರಿವಳಿ ಕೊಲೆ ಕೇಸ್; ಸಾಕ್ಷ್ಯ ಸಂಗ್ರಹಕ್ಕೆ ಘಟನೆ ಮರುಸೃಷ್ಟಿ ಮಾಡಿಸಿದ ಪೊಲೀಸರು

Spread the love

ಬೆಂಗಳೂರು: ಬೆಂಗಳೂರಿನ ಕೆ.ಆರ್ ಪುರಂದ ಸಿಗೇಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಶ್ವೇತಾ ಮತ್ತು ಕೆನತ್‌ನನ್ನು ಪೊಲೀಸರು ಕೃತ್ಯ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ. ಇದೇ ವೇಳೆ ಕೃತ್ಯವನ್ನು ಮರುಸೃಷ್ಟಿ  ಮಾಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

ಪೊಲೀಸರು ಆರೋಪಿಗಳ ಮುಂದೆ ಕೃತ್ಯ ನಡೆದ ರೀತಿಯನ್ನು ಒಂದೊಂದಾಗಿ ಪರಿಶೀಲಿಸಿದ್ದಾರೆ. ಮೊದಲು ಯಾರ ಮೇಲೆ ದಾಳಿ ನಡೆಸಲಾಯಿತು? ನಂತರ ಯಾರನ್ನು ಕೊಲೆ ಮಾಡಲಾಯಿತು? ಯಾರು ಹಲ್ಲೆ ನಡೆಸಿದರು? ಇಬ್ಬರ ಪಾತ್ರ ಏನಿತ್ತು? ಕೊಲೆ ಬಳಿಕ ಏನು ಮಾಡಿದರು? ಎಂಬ ಪ್ರತಿಯೊಂದು ಪ್ರಶ್ನೆಗೆ ಆರೋಪಿಗಳಿಂದ ಉತ್ತರ ಪಡೆದು ಅದರ ವಿಡಿಯೊ ದಾಖಲಿಸಿಕೊಂಡಿದ್ದಾರೆ.

ತನಿಖೆ ವೇಳೆ ಬೆಚ್ಚಿಬೀಳಿಸುವ ಮತ್ತಷ್ಟು ಮಾಹಿತಿಗಳು ಬೆಳಕಿಗೆ ಬಂದಿವೆ. ಕೊಲೆ ನಡೆದ ಬಳಿಕ ಆರೋಪಿಗಳು ಬಿಸಿ ನೀರಿನಲ್ಲಿ ಖಾರದ ಪುಡಿ ಬೆರೆಸಿ ಮನೆಯ ವಿವಿಧ ಭಾಗಗಳಲ್ಲಿ ಚೆಲ್ಲಿದ್ದರು. ಇದರಿಂದ ತನಿಖೆಯ ದಿಕ್ಕು ತಪ್ಪಿಸಲು ಅಥವಾ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆಯೇ ಎಂಬ ಅನುಮಾನವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಪ್ರಕರಣದ ಪ್ರತಿಯೊಂದು ಅಂಶವನ್ನು ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ಕೃತ್ಯ ಮರುಸೃಷ್ಟಿಯ ವೇಳೆ ಸಂಗ್ರಹಿಸಿದ ವಿಡಿಯೊ, ಸ್ಥಳ ಮಹಜರು ಮತ್ತು ಇತರೆ ಸಾಕ್ಷ್ಯಗಳು ತನಿಖೆಗೆ ಪ್ರಮುಖ ಆಧಾರವಾಗಲಿವೆ. ಆರೋಪಿಗಳ ವಿರುದ್ಧ ಇನ್ನಷ್ಟು ಬಲವಾದ ಸಾಕ್ಷ್ಯಗಳನ್ನು ಕಲೆಹಾಕುವ ಕೆಲಸವನ್ನು ಕೆ.ಆರ್ ಪುರಂ ಪೊಲೀಸರು ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ