Breaking News

ಡಿ-ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ – ಪ್ರಮುಖ ಸಾಕ್ಷಿಗೆ ಬೆದರಿಕೆ; ಮೂವರು ಅರೆಸ್ಟ್‌

Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್‌ ಬಂಧಿತ ಆರೋಪಿಗಳಾಗಿದ್ದು, ಮೂವರು ಮೂಲತಃ ತುಮಕೂರಿನವರು. ಪುನೀತ್ ʻಡಿ-ಕಮ್ಯುನಿಟಿʼ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್ ಅನ್ನೋದು ಬೆಳಕಿಗೆ ಬಂದಿದೆ.

ಸಾಕ್ಷ್ಯನಾಶಕ್ಕೆ ಸಂಚು ರೂಪಿಸಿದ ಈ ಅಭಿಮಾನಿಗಳ ಕೃತ್ಯದಿಂದ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ ಇನ್ನಷ್ಟು ಹೆಚ್ಚಾಗಿದೆ.

ದರ್ಶನ್‌ ಹೆಸರು ಹೇಳಿದ್ದೇ ಸಂದೀಪ್‌
ಎಂ.ಆರ್‌ ಪುನೀತ್‌‌ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನಾಗಿದ್ದಾನೆ. ರೇಣುಕಾಸ್ವಾಮಿ ಶವ ಬಿಸಾಡಲು ಮತ್ತೊಬ್ಬ ಸಾಕ್ಷಿ ಸಂದೀಪ್‌ಗೆ ಸ್ಕಾರ್ಪಿಯೋ ಕಾರು ಕೊಟ್ಟಿದ್ದೇ ಈ ಪುನೀತ್‌. ಶವ ಬಿಸಾಡಿದ ಬಳಿಕ ಕಾರನ್ನ ತೊಳೆಸಿದ್ದ. ಆ ಕಾರನ್ನ ದರ್ಶನ್‌ಗೆ ನೀಡಿದ್ದಾಗಿ, ಬಳಿಕ ರಕ್ತದ ಕಲೆ ತೊಳಿಸಿದ್ದಾಗಿಯೂ ಹೇಳಿಕೆ ನೀಡಿದ್ದ.

ಹಾಗಾಗಿ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನ ಕರೆತಂದಿಲ್ಲ ಎಂದು ಹೇಳುವಂತೆ ಪುನೀತ್‌, ಸಂದೀಪ್‌ಗೆ ಒತ್ತಡ ಹೇರಿದ್ದ. ಈ ಬಗ್ಗೆ ಕೋರ್ಟ್‌ಗೆ ಸಂದೀಪ್‌ ಪ್ರಮಾಣ ಪತ್ರ ಸಲ್ಲಿಸಿದ್ದ.

ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಇಂದು ಮೂವರನ್ನ ಬಂಧಿಸಿದ್ದಾರೆ. ವಿಚಾರಣೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

Spread the loveನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ