Breaking News

ಚಿಕ್ಕಮಗಳೂರು ಕೋರ್ಟ್‌ಗೆ ಬಾಂಬ್‌ ಬೆದರಿಕೆ – ಕಲಾಪ ನಿಲ್ಲಿಸದೇ ತಪಾಸಣೆಗೆ ಸೂಚಿಸಿದ ಜಡ್ಜ್‌

Spread the love

ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರೋ ಜಿಲ್ಲಾ ನ್ಯಾಯಾಲಯಕ್ಕೆ  ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕಿದ್ದಾರೆ. ಬೆದರಿಕೆಯ ನಡುವೆಯೇ ಕೋರ್ಟ್‌ ಕಲಾಪ ನಡೆದಿದೆ.

ಮಧ್ಯಾಹ್ನ 1:30 ರಿಂದ 3:30ರ ಒಳಗೆ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಆದರೆ ಜಡ್ಜ್‌ ಕಲಾಪ ನಿಲ್ಲಿಸದೇ ಪೊಲೀಸರಿಗೆ ತಪಾಸಣೆ ನಡೆಸುವಂತೆ ಸೂಚಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತಪಾಸಣೆ ನಡೆಯುತ್ತಿದೆ.

ನ್ಯಾಯಾಲಯಕ್ಕೆ ಎಸ್‌ಪಿ ಜಿತೇಂದ್ರ ದಯಾಮ ಭೇಟಿ ನೀಡಿ, ಪೊಲೀಸ್ ಸಿಬ್ಬಂದಿ ಜೊತೆ ಈ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ