ಯಾದಗಿರಿ: ಬದುಕು ಕಟ್ಟಿಕೊಳ್ಳಲು ಹೋಗಿದ್ದ ಯಾದಗಿರಿ ಕಾರ್ಮಿಕನೋರ್ವ ಕಲ್ಲು ಕ್ವಾರಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಡಿಹಾಳ ದೇವಸು ನಾಯಕ ತಾಂಡಾದ ನಿವಾಸಿ ರಾಮು ನಾಯಕ (೪೫ ) ಮೃತ ದುರ್ದೈವಿ.
ಮೃತ ಕಾರ್ಮಿಕ 4 ವರ್ಷ ಹಿಂದೆ ಯಾದಗಿರಿಯಿಂದ ಬೆಂಗಳೂರಿಗೆ ವಲಸೆ ಬಂದಿದ್ದರು. ಆದರೆ ಇಂದು (ಜು.2) ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಿಹಾರ ಮೂಲದ ಕಾರ್ಮಿಕರ ಜೊತೆ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದಿದ್ದು, ಪರಿಣಾಮ ಸಾವನ್ನಪ್ಪಿದ್ದಾರೆ.
Laxmi News 24×7