ಬೆಂಗಳೂರು: ಕಲ್ಯಾಣ ಮಂಟಪಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ಬಿಎಲ್ಓಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಕೆಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಕಲ್ಯಾಣ ಮಂಟಪಗಳಲ್ಲಿ ಸಿಬ್ಬಂದಿ SIR ಫಾರಂ ತುಂಬುತ್ತಿರುವ ವಿಡಿಯೋ ಹಂಚಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಕಲ್ಯಾಣ ಮಂಟಪಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ. ಬಿಎಲ್ಓಗಳೇ ಅರ್ಜಿಗಳನ್ನ ಹಂಚಬೇಕು, ಅವರೇ ಮನೆಗೆ ಹೋಗಿ ಅರ್ಜಿ ಕೊಡಬೇಕು, ಅಲ್ಲಿಯೇ ತುಂಬಬೇಕು ಎಂದು ಎಚ್ಚರಿಸಿದ್ದಾರೆ.
ಕಲ್ಯಾಣ ಮಂಟಪ ಅಥವಾ ಬೇರೆಡೆ ಕುಳಿತು ಅರ್ಜಿ ತುಂಬಲು ಯಾರಿಗೂ ಅವಕಾಶ ಇರಲ್ಲ. ರಾಮನಗರ, ಜಯನಗರ, ಕುಣಿಗಲ್, ಚಾಮರಾಜಪೇಟೆ ಎಲ್ಲಾದರೂ ಸರಿ ಮನೆಗಳಿಗೆ ಹೋಗಿ ಅರ್ಜಿ ತುಂಬಬೇಕು ಎಂದು ಅವರು ಹೇಳಿದ್ದಾರೆ.
ಪ್ರತಿಯೊಬ್ಬ ನಾಗರೀಕನಿಗೂ ಮತದಾನದ ಹಕ್ಕು ಕೊಡಬೇಕಾಗಿರೋದು ಸರ್ಕಾರದ ಕರ್ತವ್ಯ. ವಿರೋಧ ಪಕ್ಷದವರು ಆರೋಪ ಮಾಡೋಕೆ ಇರೋದು. ನಾವು ಅಧಿಕಾರದಲ್ಲಿ ಇರೋರು, ನಮ್ಮ ಕರ್ತವ್ಯ ನಾವು ಮಾಡ್ತೀವಿ ಎಂದಿದ್ದಾರೆ.
Laxmi News 24×7