Breaking News

ಎಸ್ಐಆರ್: ಕಡ್ಡಾಯವಾಗಿ ಅವಧಿಯೊಳಗೆ ನಮೂನೆ ಹಿಂತಿರುಗಿಸಿ: ಪಾಲಿಕೆ ಆಯುಕ್ತ ಕಾರ್ತಿಕ್ ಎಂ

Spread the love

ಬೆಳಗಾವಿ : ಮತಗಟ್ಟೆ ಅಧಿಕಾರಿಗಳು (ಬಿಎಲ್ಓ) ಈಗಾಗಲೇ  ಮನೆ ಮನೆಗೆ ತೆರಳಿ ಗಣತಿ ನಮೂನೆ ನೀಡುತ್ತಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನು ಸರಿಯಾದ ಮಾಹಿತಿ  ಭರ್ತಿ ಮಾಡಿ ಅವಧಿಯೊಳಗೆ ಅದನ್ನು ಹಿಂತಿರುಗಿಸುವುದು ಕಡ್ಡಾಯವಾಗಿದೆ ಎಂದು ಪಾಲಿಕೆ ಆಯುಕ್ತರು ಹಾಗೂ ಚುನಾವಣಾ ಅಧಿಕಾರಿಗಳಾಗಿರುವ ಕಾರ್ತಿಕ್ ಎಂ. ಅವರು ತಿಳಿಸಿದ್ದಾರೆ.

ಶುಕ್ರವಾರ ಈ ಕುರಿತು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಮಾಹಿತಿ ನೀಡಿ ಮಾತನಾಡಿದ ಅವರು, ಚುನಾವಣಾ ಆಯೋಗದ ಆದೇಶ ಮತ್ತು ನಡಾವಳಿಗಳ ಪ್ರಕಾರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಮತಕ್ಷೇತ್ರಗಳಲ್ಲಿ   ಎಸ್ಐಆರ್ ಪ್ರಕ್ರಿಯೆ ನಡೆದಿದೆ

ಈ ಸಂದರ್ಭದಲ್ಲಿ  ಪ್ರತಿಯೊಬ್ಬ ನಾಗರಿಕನು ತಮಗೆ ಕೊಡಲಾಗಿರುವ ಗಣತಿ ನಮೂನೆಯನ್ನು ಸರಿಯಾದ ಮಾಹಿತಿ ಸಹಿತ ಭರ್ತಿ ಮಾಡಬೇಕು. ಈ ಕುರಿತು ಯಾವುದೇ ಗೊಂದಲಗಳು, ಸಂಶಯಗಳು ಇದ್ದರೆ, ಬಿಎಲ್ಓಗಳು, ಮೇಲ್ವಿಚಾರಕರು ಇಲ್ಲವೇ ಪಾಲಿಕೆಯ ಚುನಾವಣಾ ವಿಭಾಗದ  ಸಹಾಯ ಪಡೆಯಬಹುದು. ಈ ಬಗ್ಗೆ ಯಾವುದೇ ಭಯ, ಆತಂಕ ಬೇಡ. ಮತದಾನದ ಹಕ್ಕನ್ನು ಖಾತ್ರಿಪಡಿಸಿಕೊಳ್ಳಲು ಹಾಗೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಮುಂದುವರೆಯಲು ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಳ್ಳಲೇಬೇಕು.

ನಿಗದಿತ ಅವಧಿಯಲ್ಲಿ (ಜು.29) ನಮೂನೆಯನ್ನು ಭರ್ತಿ ಮಾಡಿ ಬಿಎಲ್ಓಗಳಿಗೆ ಹಿಂತಿರುಗಿಸದಿದ್ದರೆ, ಅದಕ್ಕೆ ತಾವೇ ಹೊಣೆಯಾಗುತ್ತೀರಿ. ಅಲ್ಲದೆ ಮತದಾರರ ಪಟ್ಟಿಯಿಂದ ತಮ್ಮ ಹೆಸರು ಹೊರಗುಳಿಯಬಹುದು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ನಾಗರಿಕರು ಸಹಕರಿಸಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಸಹಕರಿಸಬೇಕೆಂದರು.


Spread the love

About Laxminews 24x7

Check Also

ಮರದ ರೆಂಬೆ ಬಿದ್ದು ಎರಡು ಕಾರುಗಳು ಜಖಂ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್‌ ಮರದ ರೆಂಬೆಯೊಂದು ಬಿದ್ದು ಎರಡು ಕಾರು ಹಾಗೂ ಒಂದು ಸ್ಕೂಟಿ ಜಖಂಗೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ