Breaking News

ಮರದ ರೆಂಬೆ ಬಿದ್ದು ಎರಡು ಕಾರುಗಳು ಜಖಂ – ತಪ್ಪಿದ ಭಾರೀ ಅನಾಹುತ

Spread the love

ಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್‌ ಮರದ ರೆಂಬೆಯೊಂದು ಬಿದ್ದು ಎರಡು ಕಾರು ಹಾಗೂ ಒಂದು ಸ್ಕೂಟಿ ಜಖಂಗೊಂಡ ಘಟನೆ ಆರ್‌ಆರ್ ನಗರದ  ಹಲಗೆವಡೆರಹಳ್ಳಿಯಲ್ಲಿ ನಡೆದಿದೆ.

ವಾಹನಗಳು ಜಖಂಗೊಂಡಿದ್ದರಿಂದ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೂ ಸರ್ಕಾರಿ ಶಾಲೆ ಪಕ್ಕದಲ್ಲೇ ಈ ಘಟನೆ ನಡೆದಿದೆ. ಈ ವೇಳೆ ಮಕ್ಕಳು ಹಾಗೂ ಜನರು ಸ್ಥಳದಲ್ಲಿ ಇಲ್ಲದೇ ಇದ್ದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಸ್ಥಳಕ್ಕೆ ಪೊಲೀಸರು ಹಾಗೂ ಜಿಬಿಎ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಬಿಎ ಸಿಬ್ಬಂದಿ ಮರದ ಕೊಂಬೆ ತೆರವುಗೊಳಿಸಿದ್ದಾರೆ.


Spread the love

About Laxminews 24x7

Check Also

ಡ್ರಗ್ ಪೆಡ್ಲರ್ ಬಂಧನಕ್ಕೆ ಹೋದ ಪೊಲೀಸರಿಗೆ ಶಾಕ್; 17 ಲಾಂಗು, 230 ಮೊಬೈಲ್ ಜಪ್ತಿ

Spread the loveಬೆಂಗಳೂರು: ಡ್ರಗ್ ಪೆಡ್ಲರ್‌ನನ್ನು ಬಂಧಿಸಲು ತೆರಳಿದ್ದ ಬ್ಯಾಟರಾಯನಪುರ ಪೊಲೀಸರಿಗೆ ಶಾಕ್ ಎದುರಾಗಿದ್ದು. ಆರೋಪಿ ಮನೆಯ ಮೇಲೆ ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ