Breaking News

ನೀರಾವರಿ ಯೋಜನೆ ಸಾಕಾರಕ್ಕೆ ಸಹಕರಿಸಿ

Spread the love

ಹುಕ್ಕೇರಿ: ತಾಲೂಕಿನ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 40 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಇದರಿಂದ ಅಂತರ್ಜಲ ಹೆಚ್ಚಾಗಿ ಬೇಸಿಗೆಯಲ್ಲಿ ಬೆಳೆಗಳಿಗೆ ನೀರಿನ ಕೊರತೆ ಕಾಡುವುದಿಲ್ಲ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.
ತಾಲೂಕಿನ ಸುಲ್ತಾನಪುರ ಬಳಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಯಾದಗೂಡ, ಬೆಳವಿ, ಶೇಲಾಪುರ, ಹುಲ್ಲೋಳಿ ಹಟ್ಟಿ ಸೇರಿದಂತೆ ಒಟ್ಟು 21 ಕೆರೆಗಳಿಗೆ 42.50 ಕೋಟಿ ರೂ. ವೆಚ್ಚದಲ್ಲಿ ನೀರು ತುಂಬಿಸಿ, 1050 ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.
ಕಳೆದ ವರ್ಷ ಪ್ರಾಯೋಗಿಕವಾಗಿ ಕೆರೆ ತುಂಬಿಸುವ ಸಂದರ್ಭದಲ್ಲಿ ಕೆಲ ರೈತರು ಪೈಪ್‌ಲೈನ್ ಒಡೆದು ತಮ್ಮ ಜಮೀನು ಮತ್ತು ಬಾವಿಗಳಿಗೆ ನೀರು ಹರಿಸಿಕೊಂಡಿದ್ದರಿಂದ ಕೆರೆಗಳಿಗೆ ನೀರು ಹರಿಸಲು ಸಾಕಷ್ಟು ಸಮಸ್ಯೆ ಆಗಿದೆ. ಈ ಬಾರಿ ಅಂತಹ ಘಟನೆ ನಡೆದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಯೋಜನೆ ಸಾಕಾರಕ್ಕೆ ರೈತರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಎಇಇ ಎಸ್.ಎಸ್.ಗುಡ್ಡಾಕಾಯಿ, ಎ.ಇ.ಸಂತೋಷ ಜಾಗನೂರ, ಮುಖಂಡರಾದ ಸತ್ಯಪ್ಪ ನಾಯಿಕ, ಗುರುರಾಜ ಕುಲಕರ್ಣಿ, ಶೀತಲ ಬ್ಯಾಳಿ, ಶಿವನಗೌಡ ಮದವಾಲ, ಮಹಾದೇವ ಪಾಟೀಲ, ಗೋಪಾಲ ಚನಗೌಡರ, ಬಸವಂತಪ್ಪ ರಡ್ಡಿ, ಗುರುಪಾದಯ್ಯ ಮಠಪತಿ, ಬಸವರಾಜ ತಳವಾರ, ಶಂಕರ ಭಡಗಾಂವಿ, ಈರಗೌಡ ಪಾಟೀಲ, ಸತಿಗೌಡ ಪಾಟೀಲ, ಅಭಿನವ ಪಾಟೀಲ, ಬಸವರಾಜ ಗಂಗಣ್ಣವರ ಇತರರಿದ್ದರು.

Spread the love

About Laxminews 24x7

Check Also

ಮಹಾ’ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆ – ಹಲವೆಡೆ ಭೂಕುಸಿತ, ಮುಂಬೈ-ಪುಣೆ ರೈಲ್ವೆ ಸಂಚಾರ ಸ್ಥಗಿತ

Spread the loveಮುಂಬೈ: ಮಹಾರಾಷ್ಟ್ರದಲ್ಲಿ  ಭೀಕರ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಪ್ರತಿಷ್ಠಿತ ಏರಿಯಾಗಳೆಲ್ಲಾ ಜಲಾವೃತವಾಗಿದೆ. ಮಂಖುರ್ಡ್ ಪ್ರದೇಶದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ