Breaking News

ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ: ಕೋಡಿಶ್ರೀ ಭವಿಷ್ಯ

Spread the love

ಹಾಸನ: ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಕೊರೊನಾ ಹೆಚ್ಚಾಗಲಿದ್ದು ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೋಡಿಮಠದಲ್ಲಿ ಮಾತನಾಡಿದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ, ಹಳ್ಳಿಗಳ ಜನರು ಎಚ್ಚರದಿಂದ ಇರಬೇಕು. ಜನರು ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.ಸ್ವಚ್ಛತೆ, ಸಾಮಾಜಿಕ ಅಂತರದ ಕಡೆ ಗಮನ ಕೊಡಬೇಕು. ಇನ್ನೂ ಕೆಲ ತಿಂಗಳು ಕೊರೊನಾ ಅಟ್ಟಹಾಸ ಇರಲಿದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಕೊರೊನಾ ಗಾಳಿಯಲ್ಲಿ ಸಂಚಾರ ಮಾಡೋದು ಕಡಿಮೆ ಜನರು ಸುರಕ್ಷತೆ ಕಾಪಾಡಿದರೆ ಕೊರೊನಾದಿಂದ ಪಾರಾಗಬಹುದು. ಜನರು ಭಯ, ಆತಂಕ ಬಿಟ್ಟು ಸರ್ಕಾರದ ಜೊತೆ ಕೈಜೋಡಿಸಿ ಎಂದು ಸ್ವಾಮೀಜಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

Spread the loveಹಾಸನ (ಮಾ.19): ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ದುಃಖದ ಛಾಯೆ ಆವರಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ