Breaking News

4 ದಿನಗಳ ಬಳಿಕ ಪತ್ರಿಕಾ ಪ್ರಕಟಣೆ – ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಂಜನಾದ್ರಿ ಹುಂಡಿ ಎಣಿಕೆ

Spread the love

ಕೊಪ್ಪಳ: ಅಂಜನಾದ್ರಿಯ ಹುಂಡಿ ಎಣಿಕೆಯಾದ ನಾಲ್ಕು ದಿನಗಳ ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಇದೀಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಕೊಪ್ಪಳ  ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹನುಮ ಹುಟ್ಟಿದ ಸ್ಥಳ ಎಂದೇ ಖ್ಯಾತಿ ಪಡೆದಿದೆ. ಇತ್ತೀಚಿಗೆ ಜು.3ರಂದು ಅಂಜನಾದ್ರಿಯ ಆಂಜನೇಯನ ಹುಂಡಿ ಎಣಿಕೆ ಕಾರ್ಯ ನಡೆದಿತ್ತು. ಅದಾದ ಬಳಿಕ ಇದೀಗ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ನಾಲ್ಕು ದಿನಗಳ ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ ತಾಲೂಕು ಆಡಳಿತದ ನಡೆ ಇದೀಗ ಅನುಮಾನಕ್ಕೆ ಗ್ರಾಸವಾಗಿದೆ.

ಇನ್ನೂ ಕಳೆದ ಬಾರಿ ಮಾ.23ರಂದು ಹುಂಡಿ ಎಣಿಕೆ ಕಾರ್ಯ ನಡೆದಿತ್ತು. ಇದೀಗ 94 ದಿನಗಳಲ್ಲಿ ಬರೋಬ್ಬರಿ 71,77,460 ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ಕಾಣಿಕೆಯಲ್ಲಿ ನೇಪಾಳ, ಅಮೆರಿಕಾ, ಥೈಲ್ಯಾಂಡ್ ಹಾಗೂ ಹಾಂಕಾಂಗ್ ಕರೆನ್ಸಿ ಪತ್ತೆಯಾಗಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ