Breaking News

ಮುಂಬೈನಲ್ಲಿ ಮಳೆಯ ರೌದ್ರನರ್ತನ; ಒಟ್ಟು 10 ಸಾವು; ಇಂದು ಕೂಡ 43 ರೈಲು ಸಂಚಾರ ರದ್ದು

Spread the love

ಮುಂಬೈ: ಕಳೆದ ಮೂರು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ, ರೈಲು ಸೇವೆ ಮತ್ತು ದೈನಂದಿನ ಬದುಕಿನ ಮೇಲೆ ಮಳೆಯ ಪರಿಣಾಮ ತೀವ್ರವಾಗಿದೆ.

ಈ ದುರ್ಘಟನೆಗಳ ನಡುವೆ ಭಿವಂಡಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ 13 ವರ್ಷದ ಬಾಲಕ ಮುಹಮ್ಮದ್ ಅಬೂಝರ್ ಕೊಚ್ಚಿಹೋಗಿದ್ದಾನೆ. ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದರೂ ನೀರಿನ ರಭಸಕ್ಕೆ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ.

ಕಳೆದ ಆರು ದಿನಗಳಲ್ಲಿ ಮುಂಬೈ ನಗರದಲ್ಲಿ ಮಳೆಯ ಅವಾಂತರಕ್ಕೆ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭಾರಿ ಮಳೆಯ ಕಾರಣ ಹಲವೆಡೆ ಭೂಕುಸಿತ, ನೀರು ನಿಲ್ಲುವುದು ಮತ್ತು ಅಪಘಾತಗಳು ಹೆಚ್ಚಾಗಿವೆ.

ಮಳೆಯ ಹೊಡೆತಕ್ಕೆ ರೈಲು ಸಂಚಾರ ತೀವ್ರವಾಗಿ ಹದಗೆಟ್ಟಿದೆ. ಇಂದು ಕೂಡ ಸೆಂಟ್ರಲ್ ಮತ್ತು ವೆಸ್ಟರ್ನ್ ರೈಲ್ವೆ ವ್ಯಾಪ್ತಿಯಲ್ಲಿ 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಕೂಡ 43 ರೈಲುಗಳ ಸಂಚಾರವನ್ನ ರದ್ದುಗೊಳಿಸಲಾಗಿದೆ. ಇದರಲ್ಲಿ ಸೆಂಟ್ರಲ್ ರೈಲ್ವೆಯ 27 ಮತ್ತು ವೆಸ್ಟರ್ನ್ ರೈಲ್ವೆಯ 16 ರೈಲುಗಳು ಸೇರಿವೆ.

ಲೋನಾವಾಲಾ-ಕರ್ಜತ್ ಘಾಟ್ ವಿಭಾಗದಲ್ಲಿ ಭೂಕುಸಿತ ಸಂಭವಿಸಿರುವುದರಿಂದ ರೈಲು ಸಂಚಾರಕ್ಕೆ ಮತ್ತಷ್ಟು ತೊಂದರೆಯಾಗಿದೆ. ಪಾಲ್ಘರ್ ಜಿಲ್ಲೆಯಲ್ಲಿ 300 ಮಿಲಿ ಮೀಟರ್‌ಗೂ ಹೆಚ್ಚು ಮಳೆಯಾಗಿದ್ದು, ನಲಸೋಪಾರಾ ಭಾಗದಲ್ಲಿ ಭಾರಿ ಜಲಾವೃತ ಉಂಟಾಗಿದೆ. ಇದರ ಪರಿಣಾಮವಾಗಿ ವಸಾಯಿ ಮತ್ತು ವಿರಾರ್ ನಡುವಿನ ಉಪನಗರ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ