Breaking News

ಕೇರಳ ಅವಳಿ ಸುರಂಗ ನಿರ್ಮಾಣ ಕಂಪನಿಗಿದೆ ಕರ್ನಾಟಕದ ನಂಟು

Spread the love

ವಯನಾಡು: ಕೇರಳದ ವಯನಾಡಿನಲ್ಲಿ ಭೂಕುಸಿತ ಸಂತ್ರಸ್ತ ಪ್ರದೇಶದಲ್ಲಿ ಅವಳಿ ಸುರಂಗ  ನಿರ್ಮಿಸುತ್ತಿರುವ ದಿಲೀಪ್ ಬಿಲ್ಡ್ ಕಾನ್‌ಗೆ ಕರ್ನಾಟಕದ ನಂಟಿದೆ. ಜೊತೆಗೆ ಕರ್ನಾಟಕದಲ್ಲಿ ಈ ಸಂಸ್ಥೆ ಕೈಗೊಂಡ ಹಲವು ಯೋಜನೆಗಳು ಕೂಡಾ ವಿವಾದಕ್ಕೆ ತುತ್ತಾಗಿದ್ದವು. ಅಲ್ಲದೆ ಕೆಲವೊಂದು ಕೆಲಸಗಳಿಗೆ ಈ ಸಂಸ್ಥೆಗೆ ನಿರ್ಬಂಧ ಕೂಡಾ ಹೇರಲಾಗಿತ್ತು.

ನಂಟು:
ಮೈಸೂರು – ಬೆಂಗಳೂರು ನಡುವಿನ 117 ಕಿ.ಮೀ ಮಾರ್ಗದ ಎಕ್ಸ್‌ಪ್ರೆಸ್‌ ವೇ ಅನ್ನು 8,480 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು ಇದೇ ದಿಲೀಪ್ ಬಿಲ್ಡ್ಕಾನ್. ಇದರ ಜೊತೆಗೆ ಮಂಗಳೂರಿನ ಕೆತ್ತಿಕಲ್‌ನಲ್ಲಿ ತಡೆಗೋಡೆಯನ್ನೂ ನಿರ್ಮಿಸಿತ್ತು. ತಡೆಗೋಡೆ ನಿರ್ಮಾಣದ ವೇಳೆ ಅವೈಜ್ಞಾನಿಕವಾಗಿ ಮಣ್ಣು ವಿಲೇವಾರಿ ಮಾಡಿದ ಆರೋಪ ಕೂಡಾ ಕಂಪನಿ ಮೇಲಿದೆ.

ವಿವಾದ:
ಮೈಸೂರು- ಬೆಂಗಳೂರು ಹೆದ್ದಾರಿ ಉದ್ಘಾಟನೆ ಗೊಂಡ ಬೆನ್ನಲ್ಲೇ 3 ತಿಂಗಳಲ್ಲೇ 90ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದಕ್ಕೆ ಹೆದ್ದಾರಿ ವಿನ್ಯಾಸದಲ್ಲಿ ದೋಷ, ರಸ್ತೆಗೆ ಪ್ರವೇಶ ಮತ್ತು ಹೊರಹೋಗುವ ದಾರಿಗಳ ವಿನ್ಯಾಸದಲ್ಲಿ ದೋಷ, ಹೆದ್ದಾರಿ ನಿರ್ಮಾಣ ವೇಳೆ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸದೇ ಇರುವುದು ಕಾರಣ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ ಇದೇ ಕಾಮಗಾರಿ ಹಣ ಬಿಡುಗಡೆಗೆ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದಲ್ಲಿ ಕಂಪನಿ ಕೆಲ ಅಧಿಕಾರಿಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಇದೇ ಕಾರಣಕ್ಕೆ ಬೆಂಗಳೂರಿನ ಸುರಂಗ ರಸ್ತೆಗೆ ಬಿಡ್ ಸಲ್ಲಿಸುವುದರಿಂದ ಈ ಕಂಪನಿಯನ್ನು ಹೊರಗಿಡಲಾಗಿತ್ತು.

ಕೊಚ್ಚಿಹೋಗಿದ್ದು ಕರ್ನಾಟಕ ಲಾರಿ:
ಮಂಗಳವಾರ ಭೂಕುಸಿದ ವೇಳೆ ಟ್ಯಾಂಕರ್ ಮಣ್ಣಿನ ಜೊತೆ ಕೊಚ್ಚಿ ಹೋಗಿತ್ತು. ಇದು ಕರ್ನಾಟಕದ ರಾಮನಗರದಲ್ಲಿ ನೋಂದಣಿಯಾಗಿದ್ದ ಟ್ಯಾಂಕರ್ ಆಗಿದೆ.

ಭೂಕುಸಿತಕ್ಕೆ ಕಾರಣ ನಾವಲ್ಲ: ದಿಲೀಪ್ ಬಿಲ್ಡ್ಕಾನ್ ಕಂಪನಿ
ಕಲ್ಲಾಡಿಯಲ್ಲಿ ನಿರ್ಮಾಣದ ಹಂತದ ಅವಳಿ ಸುರಂಗದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಕಂಪನಿ ಕಾರಣವಲ್ಲ. ನಾವು ವೈಜ್ಞಾನಿಕವಾಗಿ ಕಾಮಗಾರಿ ಮಾಡಿದ್ದೇವೆ ಎಂದು ಸುರಂಗ ನಿರ್ಮಾಣದಲ್ಲಿ ತೊಡಗಿರುವ ದಿಲೀಪ್ ಬಿಲ್ಡ್ಕಾನ್ ಕಂಪನಿ ಸ್ಪಷ್ಟನೆ ನೀಡಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಕಂಪನಿ ಅಧಿಕಾರಿಗಳು, ‘ನಾವು ಸುರಂಗದಿಂದ ತೆಗೆದ ಮಣ್ಣು ಸಂಗ್ರಹಿಸಿದ ಕಡೆ ಭೂಕುಸಿತ ಸಂಭವಿಸಿಲ್ಲ. ಅದು ಸುರಂಗ ಪ್ರದೇಶದಿಂದ 12 ಮೀಟರ್‌ನಲ್ಲಿ ಸಂಭವಿಸಿದ್ದು. ನಾವು ವೈಜ್ಞಾನಿಕವಾಗಿ ಮಣ್ಣು ವಿಲೇವಾರಿ ಮಾಡಿದ್ದೇವೆ. ಏಕಾಏಕಿ ಭಾರೀ ಮಳೆ ಸುರಿದ ಕಾರಣ ಘಟನೆ ಸಂಭವಿಸಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ